
ನವದೆಹಲಿ[ಡಿ.07]: ಭಾರತ ತಂಡದ ಮಾಜಿ ನಾಯಕ ಎಂ.ಎಸ್.ಧೋನಿ ಜತೆ ಯಾವುದೇ ಮನಸ್ತಾಪವಿಲ್ಲ ಎಂದು ಗೌತಮ್ ಗಂಭೀರ್ ಸ್ಪಷ್ಟಪಡಿಸಿದ್ದಾರೆ.
ಗಂಭೀರ್ ಅವಕಾಶಗಳ ಕೊರತೆ ಎದುರಿಸಲು ಧೋನಿಯೇ ಕಾರಣ ಎನ್ನುವ ವದಂತಿ ಇತ್ತು. ಅದಕ್ಕೆ ಗಂಭೀರ್ ತೆರೆ ಎಳೆದಿದ್ದಾರೆ. ನಿವೃತ್ತಿ ಪಂದ್ಯವನ್ನಾಡುತ್ತಿರುವ ಗಂಭೀರ್ ತಮ್ಮನ್ನು 2015ರ ಏಕದಿನ ವಿಶ್ವಕಪ್ಗೆ ಆಯ್ಕೆ ಮಾಡದ್ದಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
‘ನನ್ನ ಜತೆ ಆಡಿದ ಕೆಲ ಆಟಗಾರರಿಗೆ 2-3 ವಿಶ್ವಕಪ್ಗಳಲ್ಲಿ ಆಡುವ ಅವಕಾಶ ಸಿಕ್ಕಿತು. ನನಗೆ ಆ ಅನುಭವ ಸಿಕ್ಕಿದ್ದು ಒಮ್ಮೆ ಮಾತ್ರ. ಆದರೆ ವಿಶ್ವಕಪ್ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಕ್ಕೆ ಹೆಮ್ಮೆ ಇದೆ’ ಎಂದು ಗಂಭೀರ್ ಹೇಳಿದ್ದಾರೆ.
ಪ್ರಸ್ತುತ ನಡೆಯುತ್ತಿರುವ ಡೆಲ್ಲಿ-ಆಂಧ್ರ ಪ್ರದೇಶ ನಡುವಿನ ರಣಜಿ ಪಂದ್ಯ ಗಂಭೀರ್ ಪಾಲಿಗೆ ವಿದಾಯದ ಪಂದ್ಯವಾಗಿರಲಿದೆ. ಇನ್ನು ಗಂಭೀರ್ ರಾಜಕೀಯ ಸೇರಲಿದ್ದಾರೆ ಎನ್ನುವ ವದಂತಿಯೂ ಇದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.