
ನವದೆಹಲಿ(ನ.01): ದೆಹಲಿ ಮಾಲಿನ್ಯ ದಿನದಿಂದ ದಿನಕ್ಕೆ ಹದಗೆಡುತ್ತಿದೆ. ಹಳೇ ಕಾರುಗಳ ನಿಷೇಧ, ಖಾಸಗಿ ಕಾರು ಬಳಕೆಗೆ ನಿರ್ಬಂಧ ಸೇರಿದಂತೆ ಹಲವು ಕ್ರಮಗಳ ಫಲಿತಾಂಶ ಇನ್ನಷ್ಟೇ ಬರಬೇಕಿದೆ. ಆದರೆ ಇಷ್ಟು ದಿನ ಸರ್ಕಾರ ಏನು ಮಾಡುತ್ತಿದೆ ಅನ್ನೋ ಪ್ರಶ್ನೆ ಎದ್ದಿದೆ.
ಮಾಲಿನ್ಯ ನಿಯಂತ್ರಿಸಲು ಅರವಿಂದ ಕೇಜ್ರಿವಾಲ್ ನೇತೃತ್ವದ ಆಪ್ ಸರ್ಕಾರ ವಿಫಲವಾಗಿದೆ ಅನ್ನೋ ಕೂಗು ಕೇಳಿಬರುತ್ತಿದೆ. ಇದರ ಬೆನ್ನಲ್ಲೇ ಟೀಂ ಇಂಡಿಯಾ ಕ್ರಿಕೆಟಿಗ ಗೌತಮ್ ಗಂಭೀರ್ ದೆಹಲಿ ವಾಯು ಮಾಲಿನ್ಯ ವಿರುದ್ಧ ಗುಡುಗಿದ್ದಾರೆ.
ದೆಹಲಿಯಲ್ಲಿ ಡೆಂಗ್ಯೂ ಮಾರಕ ರೋಗ ಹಾಗೂ ಮಾಲಿನ್ಯ ತಡೆಗಟ್ಟಲು ಆಮ್ ಆದ್ಮಿ ಸರ್ಕಾರಕ್ಕೆ ಸಂಪೂರ್ಣ ಒಂದು ವರ್ಷ ಸಮಯವಿತ್ತು. ಆದರೆ ಡೆಂಗ್ಯೂ ಆಗಲಿ, ಮಾಲಿನ್ಯವಾಗಲಿ ತಡೆಗಟ್ಟಲು ಸಾಧ್ಯವಾಗಿಲ್ಲ. ನಮ್ಮ ಪೀಳಿಗೆ ಸುಳ್ಳು ಭರವಸೆಗಳನ್ನ ಉಸಿರಾಡಿದ್ದೇ ಬಂತು ಎಂದು ಗಂಭೀರ್ ಟ್ವೀಟ್ ಮಾಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.