
ಮುಂಬೈ(ಜ.16): ಖಾಸಗಿ ಟಿವಿ ಕಾರ್ಯಕ್ರಮದಲ್ಲಿ ಮಹಿಳೆಯರು ಕುರಿತು ಅಸಭ್ಯ ಹೇಳಿಕೆ ನೀಡಿರುವ ಟೀಂ ಇಂಡಿಯಾ ಅಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ಪ್ರತಿ ದಿನ ಒಂದೊಂದು ಸಂಕಷ್ಟ ಎದುರಾಗುತ್ತಿದೆ. ಈಗಾಗಲೇ ಟೀಂ ಇಂಡಿಯಾದಿಂದ ಅಮಾನತಾಗಿರುವ ಪಾಂಡ್ಯ, ಇದೀಗ ಪ್ರತಿಷ್ಠಿತ ಕ್ರೀಡಾ ಸದಸ್ಯತ್ವ ಕೂಡ ಕಳೆದುಕೊಂಡಿದ್ದಾರೆ.
ಇದನ್ನೂ ಓದಿ: ಬ್ಯಾಡ್ ಟಾಕ್: ಟೀಕೆಗಳಿಂದ ಸುಸ್ತಾದ ರಾಹುಲ್ -ಹಾರ್ದಿಕ್
ಭಾರತ ತಂಡದಿಂದ ಅಮಾನತುಗೊಂಡಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯಗೆ ನೀಡಿದ್ದ ಗೌರವ ಸದಸ್ಯತ್ವವನ್ನು ಮಂಗಳವಾರ ಇಲ್ಲಿನ ಪ್ರತಿಷ್ಠಿತ ಖಾರ್ ಜಿಮ್ಖಾನಾ ಹಿಂಪಡೆದಿದೆ. ‘ಜಿಮ್ಖಾನಾ ವತಿಯಿಂದ ಕ್ರೀಡಾಪಟುಗಳಿಗೆ ಗೌರವ ಸದಸ್ಯತ್ವ ನೀಡಲಾಗುತ್ತದೆ. 2018ರ ಅಕ್ಟೋಬರ್ನಲ್ಲಿ ಪಾಂಡ್ಯಗೆ ಈ ಗೌರವ ಸದಸ್ಯತ್ವ ನೀಡಲಾಗಿತ್ತು.
ಇದನ್ನೂ ಓದಿ: ಟೀಂ ಇಂಡಿಯಾ ಕ್ರಿಕೆಟಿಗರ ಕಪ್ ಆಫ್ ಟಿ - ಟ್ರೋಲ್ ಆದ ಹಾರ್ದಿಕ್ ಪಾಂಡ್ಯ!
ಪಾಂಡ್ಯ ಅಸಭ್ಯ ಹೇಳಿಕೆಯಿಂದ ಕ್ಲಬ್ನ ವ್ಯವಸ್ಥಾಪಕ ಸಮಿತಿ ಪಾಂಡ್ಯರಿಂದ ಗೌರವ ಸದಸ್ಯತ್ವವನ್ನು ಹಿಂಪಡೆಯಲು ಸೋಮವಾರ ಸಂಜೆ ತೀರ್ಮಾನಿಸಿತು’ ಎಂದು ಪ್ರಧಾನ ಕಾರ್ಯದರ್ಶಿ ಗೌರವ್ ಕಪಾಡಿಯಾ ಹೇಳಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.