
ನವದೆಹಲಿ(ಫೆ.13): ಇತ್ತೀಚೆಗಷ್ಟೇ ಭಾರತ ಟೆಸ್ಟ್ ಕ್ರಿಕೆಟ್ ತಂಡಕ್ಕೆ ಪಾದಾರ್ಪಣೆ ಮಾಡಿದ ಕರ್ನಾಟಕದ ಮಯಾಂಕ್ ಅಗರ್ವಾಲ್, ಟೈರ್ ತಯಾರಿಯಾ ಸಂಸ್ಥೆ ‘ಸಿಯೆಟ್’ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದಾರೆ. ‘ಸಿಯೆಟ್’ ಸಂಸ್ಥೆ ಮಯಾಂಕ್ಗೆ ಬ್ಯಾಟ್ ಪ್ರಯೋಜಕತ್ವ ನೀಡಲಿದೆ.
ಇದನ್ನೂ ಓದಿ: ಆಸೀಸ್ ವಿರುದ್ಧ ತಮಾಷೆ: ವೀರೂಗೆ ಹೇಡನ್ ಎಚ್ಚರಿಕೆ!
ಮಯಾಂಕ್ ಎಲ್ಲಾ ಮಾದರಿಯ ಕ್ರಿಕೆಟ್ನಲ್ಲಿ ‘ಸಿಯೆಟ್’ ಸ್ಟಿಕ್ಕರ್ ಉಳ್ಳ ಬ್ಯಾಟ್ ಬಳಸಲಿದ್ದಾರೆ. ಮಂಗಳವಾರದಿಂದ ಆರಂಭಗೊಂಡ ಇರಾನಿ ಟ್ರೋಫಿ ಪಂದ್ಯದಲ್ಲಿ ರಾಜ್ಯದ ಕ್ರಿಕೆಟಿಗ ಹೊಸ ಬ್ಯಾಟ್ ಬಳಸಿದರು. ಸಿಯೆಟ್ ಸಂಸ್ಥೆ ಭಾರತೀಯ ಕ್ರಿಕೆಟಿಗರಾದ ರೋಹಿತ್ ಶರ್ಮಾ, ಅಜಿಂಕ್ಯ ರಹಾನೆ, ಶುಭ್ಮನ್ ಗಿಲ್, ಹರ್ಮನ್ಪ್ರೀತ್ ಕೌರ್, ಇಶಾನ್ ಕಿಶನ್ಗೆ ಬ್ಯಾಟ್ ಪ್ರಾಯೋಜಕತ್ವ ನೀಡುತ್ತಿದೆ.
ಇದನ್ನೂ ಓದಿ: 2021ರ ಏಕದಿನ ವಿಶ್ವಕಪ್: ಭಾರತಕ್ಕಿಲ್ಲ ನೇರ ಪ್ರವೇಶ?
ವಿದರ್ಭ ವಿರುದ್ಧ ಇರಾನಿ ಟ್ರೋಫಿ ಪಂದ್ಯದಲ್ಲಿ 95 ರನ್ ಸಿಡಿಸಿರುವ ಮಯಾಂಕ್ ಅಗರ್ವಾಲ್ ರೆಸ್ಟ್ ಆಫ್ ಇಂಡಿಯಾ ತಂಡಕ್ಕೆ ಆಸರೆಯಾಗಿದ್ದರು. ಇತ್ತೀಚೆಗೆ ಟೀಂ ಇಂಡಿಯಾಗೆ ಪಾದಾರ್ಪಣೆ ಮಾಡಿದ ಮಯಾಂಕ್ 2 ಟೆಸ್ಟ್ ಪಂದ್ಯದಿಂದ 195 ರನ್ ಸಿಡಿಸಿದ್ದಾರೆ. ಇದರಲ್ಲಿ ಎರಡು ಅರ್ಧಶತಕ ಸೇರಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.