
ನವದೆಹಲಿ[ಅ.31]: ಭಾರತ ತಂಡದ ಮಾಜಿ ನಾಯಕ ಸೌರವ್ ಗಂಗೂಲಿ, ಭಾರತೀಯ ಕ್ರಿಕೆಟ್ ಅಪಯಾದಲ್ಲಿದೆ ಎಂದು ಮಂಗಳವಾರ ಆತಂಕ ವ್ಯಕ್ತಪಡಿಸಿದ್ದಾರೆ.
ಇದನ್ನು ಓದಿ: ಬಿಸಿಸಿಐ ಮುಂದಿನ ಅಧ್ಯಕ್ಷರಾಗ್ತಾರ ಸೌರವ್ ಗಂಗೂಲಿ?
ಬಿಸಿಸಿಐ ಸಿಇಒ ರಾಹುಲ್ ಜೋಹ್ರಿ ವಿರುದ್ಧ ಲೈಂಗಿಕ ಕಿರುಕುಳದ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ಧಾರ ತೆಗೆದುಕೊಳ್ಳಲು ಬಿಸಿಸಿಐನಲ್ಲೇ ಭಿನ್ನಾಭಿಪ್ರಾಯಗಳು ಕೇಳುತ್ತಿರುವುದು ಬೇಸರ ಮೂಡಿಸಿದೆ ಎಂದು ಹೇಳಿದ್ದಾರೆ. ಈ ಕುರಿತು ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್ ಚೌಧರಿ ಮತ್ತು ಅಧ್ಯಕ್ಷ ಸಿ.ಕೆ.ಖನ್ನಾಗೆ ಕಳಿಸಿರುವ ಇ-ಮೇಲ್ನಲ್ಲಿ ಹಲವು ವಿಷಯಗಳ ವಿರುದ್ಧ ಬರೆದಿದ್ದಾರೆ.
’ಪಂದ್ಯಾವಳಿ ನಡೆಯುತ್ತಿರುವ ವೇಳೆಯಲ್ಲಿಯೇ ನಿಯಮಾವಳಿಗಳನ್ನು ಬದಲಿಸಿದ್ದಾರೆ. ಇದನ್ನು ನೋಡಿದರೆ ಭಾರತೀಯ ಕ್ರಿಕೆಟ್ ಅಪಾಯದತ್ತ ಸಾಗುತ್ತಿದೆ ಎಂದನಿಸುತ್ತಿದೆ ಎಂದು ಗಂಗೂಲಿ ಆತಂಕ ವ್ಯಕ್ತಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.