
ಮುಂಬೈ(ಫೆ.04): ಭಾರತ ಕ್ರಿಕೆಟ್ ತಂಡ ಸೇರಿದಂತೆ ಎಲ್ಲಾ ತಂಡಗಳ ಆಟಗಾರರು ಮುಂಬರುವ ಜೂನ್'ನಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಗೂ ಮುನ್ನ ಇದೇ ಮೊದಲ ಬಾರಿಗೆ ವಿಶ್ವ ಉದ್ದೀಪನಾ ಮದ್ದು ವಿರೋಧಿ ಘಟಕ ನಡೆಸುವ ರಕ್ತ ಮಾದರಿ ಪರೀಕ್ಷೆಗೆ ಒಳಗಾಗಲಿದ್ದಾರೆ.
ವಾಡಾ ‘ಸ್ಮಾರ್ಟ್ ಪರೀಕ್ಷೆ’ಗೆ ಆಟಗಾರರನ್ನು ತಪಾಸಣೆಗೊಳಪಡಿಸುವ ಕಾರ್ಯ ಯೋಜನೆ ರೂಪಿಸಿದೆ. ಇದು ಆಟಗಾರರ ದೈಹಿಕ ಸಾಮರ್ಥ್ಯದ ಪಾಸ್ಪೋರ್ಟ್ ಆಗಿ ಕಾರ್ಯನಿರ್ವಹಿಸಲಿದೆ ಎಂದು ವಾಡಾ ತಿಳಿಸಿದೆ.
ಈ ಬಗ್ಗೆ ಭಾರತ ಕ್ರಿಕೆಟ್ ತಂಡದ ಆಟಗಾರರಿಗೆ, ಕಳೆದ ತಿಂಗಳು ಇಂಗ್ಲೆಂಡ್ ವಿರುದ್ಧದ ಪುಣೆಯಲ್ಲಿ ನಡೆದಿದ್ದ ಮೊದಲ ಏಕದಿನ ಪಂದ್ಯಕ್ಕೂ ಮುನ್ನ ಐಸಿಸಿ ಡೋಪಿಂಗ್ ತಂಡ ಮಾಹಿತಿ ನೀಡಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.