
ಬೆಂಗಳೂರು(ಸೆ.19): ಕಂಠೀರವ ಕ್ರೀಡಾಂಗಣದಲ್ಲಿನ ಗುಂಡಿಬಿದ್ದ ಸಿಂಥೆಟಿಕ್ ಟ್ರ್ಯಾಕ್ನಲ್ಲಿ ರಾಜ್ಯ ಕ್ರೀಡಾ ಇಲಾಖೆ ಗುರುವಾರದಿಂದ 2 ದಿನಗಳ ಕಾಲ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ನಡೆಸುತ್ತಿದೆ. ಇದು ಮೈಸೂರು ದಸರಾ ಕ್ರೀಡಾಕೂಟದ ಆಯ್ಕೆ ಟ್ರಯಲ್ಸ್.
ಬೆಂಗಳೂರಿನಿಂದ ರಾಷ್ಟ್ರೀಯ ಅಥ್ಲೆಟಿಕ್ಸ್ ರಾಂಚಿಗೆ ಎತ್ತಂಗಡಿ..!
ಅಲ್ಲಲ್ಲಿ ಕಿತ್ತು ಹೋಗಿರುವ ಟ್ರ್ಯಾಕ್ಗೆ ಕೆಲ ತಿಂಗಳ ಹಿಂದಷ್ಟೇ ಕ್ರೀಡಾಂಗಣದ ಸಿಬ್ಬಂದಿ ತೇಪೆ ಹಾಕಿದ್ದರು. ಇದೀಗ ಅದೂ ಹಾಳಾಗಿದೆ. ಟ್ರ್ಯಾಕ್ನಲ್ಲಿ ದೊಡ್ಡ ಗುಂಡಿಗಳಿದ್ದರೂ, ಅದನ್ನೇ ಬಳಸುತ್ತಿರುವುದು ಕ್ರೀಡಾ ಇಲಾಖೆಯ ದುಸ್ಥಿತಿಯನ್ನು ತೋರಿಸುತ್ತಿದೆ. ಈ ಟ್ರ್ಯಾಕ್ನಲ್ಲಿ ಓಡುವಾಗ ಅಥ್ಲೀಟ್ಗಳಿಗೆ ಗಾಯವಾದರೆ ಇಲಾಖೆಯ ಹೊಣೆಯಾಗಬೇಕಾದ ಪರಿಸ್ಥಿತಿ ಇದೆ. ಬೆಂಗಳೂರಲ್ಲಿ ಕಂಠೀರವ ಕ್ರೀಡಾಂಗಣ ಹೊರತುಪಡಿಸಿ ಉಳಿದೆಲ್ಲೂ ಸಿಂಥೆಟಿಕ್ ಟ್ರ್ಯಾಕ್ ಇಲ್ಲವೇ ಎನ್ನುವ ಪ್ರಶ್ನೆಗೆ ಈ ಕೂಟ ದಾರಿ ಮಾಡಿಕೊಟ್ಟಿದೆ.
ಸಿಂಥೆಟಿಕ್ ಟ್ರ್ಯಾಕ್ ಹಾಗೂ ಕಂಠೀರವ ಕ್ರೀಡಾಂಗಣದ ಮೂಲಭೂತ ಸಮಸ್ಯೆಗಳ ಬಗ್ಗೆ ಸುವರ್ಣ ನ್ಯೂಸ್.ಕಾಂ ಸಹೋದರ ಸಂಸ್ಥೆಯಾದ ‘ಕನ್ನಡಪ್ರಭ’ ಇತ್ತೀಚೆಗಷ್ಟೇ ಸರಣಿ ವರದಿ ಪ್ರಕಟಿಸಿ ರಾಜ್ಯ ಸರ್ಕಾರದ ಗಮನಕ್ಕೆ ತಂದಿತ್ತು. ಆ ಸಮಯದಲ್ಲಿ ಎಚ್ಚೆತ್ತುಕೊಂಡಿದ್ದ ಅಧಿಕಾರಿಗಳು ಮೂಲಭೂತ ಸೌಕರ್ಯಗಳನ್ನು ತಿಂಗಳಲ್ಲಿ ಸರಿಪಡಿಸಿದ್ದರು. ಆದರೆ ಟ್ರ್ಯಾಕ್ ಮರು ಅಳವಡಿಕೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳಲಾಗುತ್ತಿದೆ. ಟೆಂಡರ್ ಮೊತ್ತ ನಿರೀಕ್ಷಿಗಿಂತ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದ್ದು, ಸರ್ಕಾರದ ಗಮನಕ್ಕೆ ತಂದಿದ್ದೇವೆ ಎಂದು ಇಲಾಖೆ ಅಧಿಕಾರಿ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.