
ನವದೆಹಲಿ(ಆ.06): ಬರೋಬ್ಬರಿ 55 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಭಾರತ ಟೆನಿಸ್ ತಂಡ ಪ್ರವಾಸ ಮಾಡುತ್ತಿದೆ. 1964 ರ ಬಳಿಕ ಡೇವಿಸ್ ಕಪ್ ಟೂರ್ನಿಗಾಗಿ ಬದ್ಧವೈರಿಗಳ ನಾಡಿಗೆ ಭಾರತ ಪ್ರಯಾಣ ಬೆಳೆಸಿಲ್ಲ. ಸೆಪ್ಟೆಂಬರ್ 14 ಹಾಗೂ 15 ರಂದು ಇಸ್ಲಾಮಾಬಾದ್ನಲ್ಲಿ ನಡೆಯಲಿರುವ ಡೇವಿಸ್ ಕಪ್ ಟೂರ್ನಿಗಾಗಿ ಭಾರತ ತಂಡ ಪ್ರಕಟಿಸಲಾಗಿದೆ. ತಂಡದಲ್ಲಿ ಕನ್ನಡಿಗ ಸ್ಥಾನ ಪಡೆದಿದ್ದಾರೆ.
ಇದನ್ನೂ ಓದಿ: ಡೇವಿಸ್ ಕಪ್: 55 ವರ್ಷಗಳ ಬಳಿಕ ಪಾಕಿಸ್ತಾನಕ್ಕೆ ಭಾರತ, ಭದ್ರತೆ ಭರವಸೆ!
ಪ್ರಜ್ಞೇಶ್ವರ್ ಗುಣೇಶ್ವರನ್ ಭಾರತ ಡೇವಿಸ್ ಕಪ್ ತಂಡವನ್ನು ಮುನ್ನಡೆಸಲಿದ್ದಾರೆ. ಸಿಂಗಲ್ಸ್ ವಿಭಾಗದಲ್ಲಿ ಗುಣೇಶ್ವರನ್ ಹಾಗೂ ರಾಮಕುಮಾರ್ ರಾಮನಾಥನ್ ಆಯ್ಕೆಯಾಗಿದ್ದರೆ, ಡಬಲ್ಸ್ ವಿಭಾಗದಲ್ಲಿ ಕನ್ನಡಿಗ ರೋಹನ್ ಬೋಪಣ್ಣ ಹಾಗೂ ದಿವಿಜಿ ಶರಣ್ ಆಯ್ಕೆಯಾಗಿದ್ದಾರೆ.
ಮೀಸಲು ಟೆನಿಸ್ ಪುಟುವಾಗಿ ಸಸಿ ಕುಮಾರ್ ಮುಕುಂದ್ ಆಯ್ಕೆಯಾಗಿದ್ದಾರೆ. ಇನ್ನು ಅತ್ಯುತ್ತಮ ಪ್ರದರ್ಶನದ ಮೂಲಕ ಗಮನಸೆಳೆದ ಸುಮಿತ್ ನಗಾಲ್ ಇಂಜುರಿ ಕಾರಣದಿಂದ ಟೂರ್ನಿಗೆ ಲಭ್ಯರಿಲ್ಲ. ಸೆ.14-15ರಂದು ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಏಷ್ಯಾ/ಓಷಿಯಾನಿಯಾ ಗುಂಪು 1 ಪಂದ್ಯ ನಡೆಯಲಿದೆ. ಭಾರತ ತಂಡಕ್ಕೆ ಗರಿಷ್ಠ ಭದ್ರತೆ ನೀಡಲಾಗುವುದು ಎಂದು ಪಾಕಿಸ್ತಾನ ಸ್ಪಷ್ಟಪಡಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.