ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆ..! ಜತೆಗಾರ್ತಿಯೂ ಆತ್ಮಹತ್ಯೆಗೆ ಯತ್ನ

Published : May 06, 2023, 12:26 PM IST
ಕೇರಳದ ಮೊದಲ ತೃತೀಯಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆ..! ಜತೆಗಾರ್ತಿಯೂ ಆತ್ಮಹತ್ಯೆಗೆ ಯತ್ನ

ಸಾರಾಂಶ

ಕೇರಳದ ತೃತೀಯಲಿಂಗಿ ಬಾಡಿಬಿಲ್ಡರ್ ಆತ್ಮಹತ್ಯೆಯಿಂದ ಕೊನೆಯುಸಿರು ವಿಷ ಸೇವಿಸಿ ಇಹಲೋಕ ತ್ಯಜಿಸಿದ ಪ್ರವೀಣ್‌ ನಾಥ್ ಪ್ರವೀಣ್ ನಾಥ್ ಗೆಳತಿ ಕೂಡಾ ಆತ್ಮಹತ್ಯಗೆ ಯತ್ನ, ಪರಿಸ್ಥಿತಿ ಗಂಭೀರ

ತಿರುವನಂತಪುರಂ(ಮೇ.06): ಕೇರಳದ ಮೊದಲ ತೃತೀಯ ಲಿಂಗಿ ಬಾಡಿಬಿಲ್ಡರ್‌ ಪ್ರವೀಣ್‌ ನಾಥ್‌ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಘಟನೆ ನಡೆದು ಕೆಲವೇ ಗಂಟೆಗಳ ಬಳಿಕ ಅವರ ಜತೆಗಾರ್ತಿ ಕೂಡಾ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಪ್ರವೀಣ್ ನಾಥ್ ಅವರ ಪಾರ್ಟ್ನರ್‌ ರಿಶಾನಾ ಆಯೆಶಾ ಕೂಡಾ ಆತ್ಮಹತ್ಯೆಗೆ ಯತ್ನಿಸಿದ್ದು, ಪರಿಸ್ಥಿತಿ ಗಂಭೀರ ಎನಿಸಿದೆ.

ಟ್ರಾನ್ಸ್‌ಜೆಂಡರ್ ಬಾಡಿಬಿಲ್ಡರ್‌ ಅವರ ಜತೆಗಾರ್ತಿ ರಿಶಾನಾ ಆಯೆಶ್‌ ಓರ್ವ ಮಾಡೆಲ್ ಆಗಿ ಗುರುತಿಸಿಕೊಂಡಿದ್ದು, ಅವರು ಕೂಡಾ ಆತ್ಮಹತ್ಯಗೆ ಯತ್ನಿಸಿದ್ದಾರೆ. ಇದೀಗ ರಿಶಾನಾ ಅವರನ್ನು ತ್ರಿಶೂರ್ ಜಿಲ್ಲೆಯ ಸರ್ಕಾರಿ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಪರಿಸ್ಥಿತಿ ಕೂಡಾ ಚಿಂತಾಜನಕವಾಗಿದೆ ಎಂದು ವರದಿಯಾಗಿದೆ. ಪ್ರವೀಣ್ ನಾಥ್ ಅವರು ಗುರುವಾರವಷ್ಟೇ ತಮ್ಮ ಮನೆಯಲ್ಲಿಯೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರು.

Dreams Meaning : ಸಲಿಂಗಕಾಮಿ ಕನಸುಗಳು ಬೀಳುವುದೇಕೆ?

ಈ ಇಬ್ಬರ ಮೇಲೆ ಇತ್ತೀಚೆಗಿನ ದಿನಗಳಲ್ಲಿ ಸಾಮಾಜಿಕ ಜಾಲತಾಣಗಳ ಮೂಲಕ ಸೈಬರ್‌ದಾಳಿಯಿಂದಾಗಿ ನಿರಾಸೆ ಹಾಗೂ ಅವಮಾನಕ್ಕೊಳಗಾಗಿದ್ದರು. ಈ ಕಾರಣಕ್ಕಾಗಿಯೇ ಈ ಘಟನೆ ಸಂಭವಿಸಿದೆ ಎಂದು ತೃತೀಯಲಿಂಗಿ ಸಮುದಾಯದವರು ಆರೋಪಿಸಿದ್ದಾರೆ. ಪ್ರವೀಣ್ ನಾಥ್ ಅವರು ರಿಶಾನ್‌ ಅವರನ್ನು ಫೆಬ್ರವರಿ 14ರ ಪ್ರೇಮಿಗಳ ದಿನದಂದೇ ವಿವಾಹವಾಗಿದ್ದರು. ಇದರ ಬೆನ್ನಲ್ಲೇ ಹಲವಾರು ಮಂದಿ ನೆಟ್ಟಿಗರು ಸಾಮಾಜಿಕ ಜಾಲತಾಣಗಳಲ್ಲಿ ಸೈಬರ್‌ಅಟ್ಯಾಕ್‌ ಮಾಡಿದ್ದರು. ಇದರಿಂದ ಬೇಸತ್ತು ಈ ಜೋಡಿ ಸೋಷಿಯಲ್ ಮೀಡಿಯಾದಿಂದ ಹೊರಬಂದಿದ್ದರು. 

ಈ ದಂಪತಿಗಳು ಬೇರೆ-ಬೇರೆಯಾಗುತ್ತಿದ್ದಾರೆ ಎಂದು ಪೋಸ್ಟರ್‌ ಒಂದು ಹರಿದಾಡುತ್ತಿತ್ತು. ಈ ಪೋಸ್ಟ್ ನೋಡಿದ ಬಳಿಕ ನಾನಂತೂ ಭಾವನಾತ್ಮಕವಾಗಿ ಕುಸಿದು ಹೋಗಿದ್ದೇನೆ. ನಾನು ಆ ಪೋಸ್ಟ್ ಡಿಲೀಟ್ ಮಾಡಿದ್ದರೂ ಸಹಾ, ಅದರ ಸ್ಕ್ರೀನ್‌ಶಾಟ್‌ ಬೇರೆ ಬೇರೆ ಕಡೆ ಹರಿದಾಡುತ್ತಿದೆ ಎಂದು ಪ್ರವೀಣ್‌ ನಾಥ್ ತಾವು ಆತ್ಮಹತ್ಯೆ ಮಾಡಿಕೊಳ್ಳುವ ಎರಡು ದಿನ ಮುಂಚೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದರು.

ಈ ಜೋಡಿಯು 2020ರಲ್ಲಿ ತ್ರಿಶೂರ್‌ನಲ್ಲಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಲೈಂಗಿಕ ಅಲ್ಪಸಂಖ್ಯಾತರ ಹಕ್ಕುಗಳ ಹೋರಾಟಕ್ಕಾಗಿ ನಡೆದ ಸಮಾವೇಶದಲ್ಲಿ ಈ ಜೋಡಿ ಮೊದಲ ಬಾರಿಗೆ ಭೇಟಿಯಾಗಿದ್ದರು. ಇದಾದ ಬಳಿಕ ಈ ಇಬ್ಬರ ನಡುವೆ ಪ್ರೇಮಾಂಕುರ ಬೆಳೆದು ವ್ಯಾಲೆಂಟೈನ್ ಡೇ ದಿನದಂದು ವೈವಾಹಿಕ ಜೀವನಕ್ಕೆ ಕಾಲಿರಿಸಿದ್ದರು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

Read more Articles on
click me!

Recommended Stories

ಕ್ಯಾಮರೋನ್ ಗ್ರೀನ್ ಬಳಿಕ ಮತ್ತೋರ್ವ ಕಾಸ್ಟ್ಲಿ ಆಟಗಾರನನ್ನು ಖರೀದಿಸಿದ ಕೋಲ್ಕತಾ! ಕೆಕೆಆರ್ ಈಗ ಮತ್ತಷ್ಟು ಬಲಿಷ್ಠ
ಗ್ರೀನ್‌ನಿಂದ ಮೊರಿಸ್‌ವರೆಗೆ, ಐಪಿಎಲ್‌ ಮಿನಿ ಹರಾಜಿನ ಅತ್ಯಂತ ದುಬಾರಿ ಪ್ಲೇಯರ್ಸ್‌!