ಕುತೂಹಲ ಹೆಚ್ಚಿಸಲಿದೆ ಕೊನೆಯ 3 ಒನ್'ಡೇಗಳು...! ಯಾಕೆ ಗೊತ್ತಾ..?

Published : Feb 09, 2018, 07:19 PM ISTUpdated : Apr 11, 2018, 12:55 PM IST
ಕುತೂಹಲ ಹೆಚ್ಚಿಸಲಿದೆ ಕೊನೆಯ 3 ಒನ್'ಡೇಗಳು...! ಯಾಕೆ ಗೊತ್ತಾ..?

ಸಾರಾಂಶ

ಈಗಾಗಲೇ ಕೇವಲ 3 ಪಂದ್ಯಗಳಲ್ಲಿ ಭಾರತದ ಸ್ಟಾರ್ ಸ್ಪಿನ್'ದ್ವಯರಾದ ಚಾಹಲ್ ಹಾಗೂ ಕುಲ್ದೀಪ್ 21 ವಿಕೆಟ್ ಕಬಳಿಸಿದ್ದು, ಈ ಜೋಡಿಯನ್ನು ಎಬಿಡಿ ಹೇಗೆ ಎದುರಿಸುತ್ತಾರೆ ಎಂದು ಕಾದುನೋಡಬೇಕಿದೆ. ಸಮಕಾಲಿನ ದಿಗ್ಗಜ ಬ್ಯಾಟ್ಸ್'ಮನ್'ಗಳಾದ ಕೊಹ್ಲಿ ಹಾಗೂ ಆರ್'ಸಿಬಿ ತಂಡದ ಮತ್ತೋರ್ವ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ ಮುಖಾಮುಖಿಯಾಗುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಜೊಹಾನ್ಸ್'ಬರ್ಗ್(ಫೆ.09): ಭಾರತ ವಿರುದ್ಧ ಅಂತಿಮ 3 ಪಂದ್ಯಗಳಿಗೆ ದಕ್ಷಿಣ ಆಫ್ರಿಕಾ ತಂಡವನ್ನು ಪ್ರಕಟಿಸಲಾಗಿದ್ದು, ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ ತಂಡವನ್ನು ಕೂಡಿಕೊಂಡಿದ್ದಾರೆ. ಕೈಬೆರಳಿನ ಗಾಯದ ಸಮಸ್ಯೆಯಿಂದಾಗಿ ಮೊದಲ 3 ಪಂದ್ಯಗಳಿಂದ ಹೊರಗುಳಿದಿದ್ದ ಎಬಿಡಿ ವಾಂಡರರ್ಸ್'ನಲ್ಲಿ ನಡೆಯಲಿರುವ ಪಂದ್ಯದಲ್ಲಿ ಕಣಕ್ಕಿಳಿಯುವ ಸಾಧ್ಯತೆಯಿದೆ.

ಈಗಾಗಲೇ ಸರಣಿಯಲ್ಲಿ 3-0 ಹಿನ್ನಡೆ ಅನುಭವಿಸಿರುವ ಆಫ್ರಿಕಾಗೆ ಎಬಿಡಿ ಆಗಮನ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಲಿದೆ. ಈಗಾಗಲೇ ಕೇವಲ 3 ಪಂದ್ಯಗಳಲ್ಲಿ ಭಾರತದ ಸ್ಟಾರ್ ಸ್ಪಿನ್'ದ್ವಯರಾದ ಚಾಹಲ್ ಹಾಗೂ ಕುಲ್ದೀಪ್ 21 ವಿಕೆಟ್ ಕಬಳಿಸಿದ್ದು, ಈ ಜೋಡಿಯನ್ನು ಎಬಿಡಿ ಹೇಗೆ ಎದುರಿಸುತ್ತಾರೆ ಎಂದು ಕಾದುನೋಡಬೇಕಿದೆ. ಸಮಕಾಲಿನ ದಿಗ್ಗಜ ಬ್ಯಾಟ್ಸ್'ಮನ್'ಗಳಾದ ಕೊಹ್ಲಿ ಹಾಗೂ ಆರ್'ಸಿಬಿ ತಂಡದ ಮತ್ತೋರ್ವ ಸ್ಟಾರ್ ಆಟಗಾರ ಎಬಿ ಡಿವಿಲಿಯರ್ಸ್ ಮುಖಾಮುಖಿಯಾಗುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.

ಎಬಿಡಿ ಹೊರತುಪಡಿಸಿ ಮತ್ಯಾವುದೇ ಬದಲಾವಣೆಯನ್ನು ದಕ್ಷಿಣ ಆಫ್ರಿಕಾ ತಂಡ ಮಾಡಿಲ್ಲ. ಹಿರಿಯ ಆಟಗಾರರಾದ ಹಾಶೀಂ ಆಮ್ಲಾ, ಮಾರ್ನೆ ಮಾರ್ಕೆಲ್ ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದು, ಗಾಯದ ಸಮಸ್ಯಯಿಂದಾಗಿ ಡಿಕಾಕ್ ಹಾಗೂ ಡುಪ್ಲೆಸಿಸ್ ತಂಡದಿಂದ ಹೊರಗುಳಿದಿದ್ದಾರೆ. ಹಂಗಾಮಿ ನಾಯಕನಾಗಿ ಏಡನ್ ಮಾರ್ಕ್'ರಮ್ ಮುಂದುವರೆದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?