
ಮುಂಬೈ(ಜು.15): ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ಮೇಲೆ ವಿಧಿಸಿದ್ದ 2 ವರ್ಷಗಳ ನಿಷೇಧ ಜು.13ರಂದು ಅಧಿಕೃತವಾಗಿ ಅಂತ್ಯಗೊಂಡಿದ್ದು, ಎರಡೂ ತಂಡಗಳು ಮುಂದಿನ ವರ್ಷದಿಂದ ಐಪಿಎಲ್ ಆಡಲು ತುದಿಗಾಲಿನಲ್ಲಿ ನಿಂತಿವೆ.
ತಂಡಗಳ ಮೇಲೆ ವಿಧಿಸಿದ್ದ ನಿಷೇಧ ಅಂತ್ಯಗೊಂಡಿದೆ. ಸಾಮಾಜಿಕ ಜಾಲತಾಣಗಳ ಮೂಲಕ ಈ ವಿಷಯವನ್ನು ಪ್ರಚಾರಗೊಳಿಸುವ ಕ್ರಿಯೆಗೆ ಚಾಲನೆ ನೀಡಲಾಗುವುದು. ಒಂದೊಮ್ಮೆ ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿದರೆ, ನಾವು ಖಂಡಿತವಾಗಿಯೂ ನಮ್ಮ ನಾಯಕ ಎಂ.ಎಸ್ ಧೋನಿಯನ್ನು ತಂಡಕ್ಕೆ ಸೇರಿಸಿಕೊಳ್ಳುತ್ತೇವೆ. ಈ ಕುರಿತು ಧೋನಿಯೊಂದಿಗೆ ಚರ್ಚೆ ನಡೆಸಿಲ್ಲ ಎಂದು ಸಿಎಸ್'ಕೆ ಕ್ರಿಕೆಟ್ ಲಿಮಿಟೆಡ್'ನ ನಿರ್ದೇಶಕರಲ್ಲೊಬ್ಬರಾದ ಕೆ. ಜಾರ್ಜ್ ತಿಳಿಸಿದ್ದಾರೆ.
2013ರ ಐಪಿಎಲ್ ಆವೃತ್ತಿ ವೇಳೆ ಸಿಎಸ್'ಕೆ ಹಾಗೂ ರಾಜಸ್ಥಾನ ರಾಯಲ್ಸ್ ತಂಡದ ಮಾಲೀಕರು ಬೆಟ್ಟಿಂಗ್ ನಡೆಸಿದ್ದು ಸಾಬೀತಾಗಿತ್ತು. ಈ ಹಿನ್ನೆಲೆಯಲ್ಲಿ 2015ರಲ್ಲಿ ಎರಡೂ ತಂಡಗಳನ್ನು 2 ವರ್ಷಗಳ ಕಾಲ ಐಪಿಎಲ್ ಟೂರ್ನಿಯಿಂದ ಹೊರಗಿಡಲಾಗಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.