
ಲೀಡ್ಸ್(ಜು.17): ಇಂಗ್ಲೆಂಡ್ ವಿರುದ್ಧದ 3ನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿದಿರುವ ಭಾರತ 2 ವಿಕೆಟ್ ಕಳೆದುಕೊಂಡಿದೆ. ಸರಣಿ ನಿರ್ಧಾರದ ಪಂದ್ಯದಲ್ಲಿ ಭಾರತ ಎಚ್ಚರಿಕೆಯ ಆರಂಭ ಪಡೆದಿತ್ತು. ಆದರೆ ರೋಹಿತ್ ಶರ್ಮಾ ಕೇವಲ 2 ರನ್ಗಳಿಸಿ ನಿರ್ಗಮಿಸಿದರು.
ರೋಹಿತ್ ನಿರ್ಗಮನದ ಬಳಿಕ ಶಿಖರ್ ಧವನ್ ಹಾಗೂ ನಾಯಕ ವಿರಾಟ್ ಕೊಹ್ಲಿ ಜೊತೆಯಾಟದಿಂದ ಟೀಂ ಇಂಡಿಯಾ ಚೇತರಿಸಿಕೊಂಡಿತು. ಆದರೆ ಧವನ್ ಅರ್ಧಶತಕದ ಸನಿಹದಲ್ಲಿ ಎಡವಿದರು. 44 ರನ್ ಸಿಡಿಸಿದ ಧವನ್ ರನೌಟ್ಗೆ ಬಲಿಯಾದರು. ಈ ಮೂಲಕ ಭಾರತ 84ರನ್ಗೆ 2ನೇ ವಿಕೆಟ್ ಕಳೆದುಕೊಂಡಿತು.
ಇಂಗ್ಲೆಂಡ್ ವಿರುದ್ಧದ 3 ಏಕದಿನ ಪಂದ್ಯದ ಸರಣಿಯ 1-1 ಅಂತರದಲ್ಲಿ ಸಮಭಲಗೊಂಡಿದೆ. ಹೀಗಾಗಿ ಇಂದಿನ ಪಂದ್ಯ ಸರಣಿಯನ್ನ ನಿರ್ಧರಿಸಲಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.