ನ್ಯೂಸ್ ಪೇಪರ್ ಓದಬೇಡ ಎಂದು ಧೋನಿ ಸಲಹೆ!

Published : Jul 29, 2018, 11:11 AM ISTUpdated : Jul 30, 2018, 12:16 PM IST
ನ್ಯೂಸ್ ಪೇಪರ್ ಓದಬೇಡ ಎಂದು ಧೋನಿ ಸಲಹೆ!

ಸಾರಾಂಶ

ಟೀಂ ಇಂಡಿಯಾ ಯುವ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್‌ಗೆ ಟೀಂ ಇಂಡಿಯಾ ಮಾಜಿ ನಾಯಕ ಎಂ ಎಸ್ ಧೋನಿ ಸಲಹೆ ನೀಡಿದ್ದಾರೆ. ನ್ಯೂಸ್ ಪೇಪರ್ ಹಾಗೂ ಸಾಮಾಜಿಕ ಜಾಲತಾಣದಿಂದ ದೂರ ಇರಲು ಎಂ ಎಸ್ ಧೋನಿ ಸಲಹೆ ನೀಡಿದ್ದೇಕೆ? ಇಲ್ಲಿದೆ ವಿವರ.

ನವದಹೆಲಿ(ಜು.29) ಯುವ ಕ್ರಿಕೆಟಿಗರಿಗೆ ಮೈದಾನದಲ್ಲಿ ಉಪಯುಕ್ತ ಸಲಹೆ, ಸೂಚನೆಗಳನ್ನು ನೀಡುವ ಮಾಜಿ ನಾಯಕ ಎಂ.ಎಸ್.ಧೋನಿ, ಮೈದಾನದಾಚೆಗೂ ಆಟಗಾರರಿಗೆ ಸಹಾಯ ಹಸ್ತ ಚಾಚಿದ್ದಾರೆ. ಭಾರತ ತಂಡದ ಯುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಖಾಸಗಿ ಕಾರ್ಯಕ್ರಮದಲ್ಲಿ ಧೋನಿ ತಮಗೆ ನೀಡಿರುವ ಸಲಹೆಗಳನ್ನು ಬಿಚ್ಚಿಟ್ಟಿದ್ದಾರೆ.

‘ಭಾರತ ತಂಡಕ್ಕೆ ನಾನು ಸೇರ್ಪಡೆಗೊಂಡ ಬಳಿಕ, ಧೋನಿ ನನಗೆ ದಿನಪತ್ರಿಕೆಗಳಿಂದ ದೂರವಿರುವಂತೆ ಸಲಹೆ ನೀಡಿದರು’ ಎಂದು ಶ್ರೇಯಸ್ ಹೇಳಿದ್ದಾರೆ. ‘ಆದಷ್ಟು ಸಾಮಾಜಿಕ ಮಾಧ್ಯಮಗಳ ಬಳಕೆಯನ್ನು ಕಡಿಮೆ ಮಾಡು. ಆಟದತ್ತ ಹೆಚ್ಚು ಗಮನ ಹರಿಸು’ ಎಂದು ಧೋನಿ ಹೇಳಿರುವುದಾಗಿ ಶ್ರೇಯಸ್ ಹೇಳಿದರು.

ಹಿಂದೆ ಬಿದ್ದಿದ್ದ ಹುಡುಗಿ!: ಕಾರ್ಯಕ್ರಮದಲ್ಲಿ ಶ್ರೇಯಸ್ ಸಾಮಾಜಿಕ ಮಾಧ್ಯಮಗಳಿಂದ ಆಟಗಾರರಿಗೆ ಎದುರಾಗುವ ಸಮಸ್ಯೆಗಳ ಕುರಿತು ಸಹ ಮಾತನಾಡಿದರು. ‘ಐಪಿಎಲ್ ಹರಾಜಿನ ಬಳಿಕ ನನಗೆ ಪರಿಚಯವಿದ್ದ ಹುಡುಗಿಯೊಬ್ಬಳು ಪ್ರತಿ ದಿನ ನನಗೆ ಸಂದೇಶಗಳನ್ನು ಕಳುಹಿಸಲು ಆರಂಭಿಸಿದಳು. ನನ್ನನ್ನು ಸಂಪರ್ಕಿಸಲು ಇನ್ನಿಲ್ಲದ ಪ್ರಯತ್ನಗಳನ್ನು ನಡೆಸುತ್ತಿದ್ದಳು. ನನ್ನ ಯಶಸ್ಸಿನ ಬಗ್ಗೆ ಆಕೆಗೆ ಖುಷಿ ಇದೆ ಎಂದು ನನಗೆ ತಿಳಿಯಿತು. ಇದೇ ವೇಳೆ ಆಕೆ ದುಡ್ಡಿನ ಹಿಂದೆ ಬಿದ್ದಿದ್ದಾಳೆ ಎನ್ನುವುದು ಸಹ ಅರ್ಥವಾಯಿತು’ ಎಂದು ಶ್ರೇಯಸ್ ಹೇಳಿದರು.

‘ಭಾರತ ತಂಡದಲ್ಲಿ ಸ್ಥಾನ ಪಡೆದ ಬಳಿಕ ನನ್ನ ಆಟ ಬಹಳಷ್ಟು ಸುಧಾರಿಸಿತು. ಧೋನಿ ಜತೆ ಹಿರಿಯ ಆಟಗಾರರಾದ ಕೊಹ್ಲಿ, ರಹಾನೆ ಸಹ ನನಗೆ ಅನೇಕ ಸಲಹೆಗಳನ್ನು ನೀಡಿದ್ದಾರೆ. ನನ್ನ ಆತ್ಮವಿಶ್ವಾಸ ಹೆಚ್ಚಾಗಿದ್ದು, ತಂಡದಲ್ಲಿ ಮತ್ತಷ್ಟು ಅವಕಾಶಗಳಿಗೆ ಕಾಯುತ್ತಿದ್ದೇನೆ’ ಎಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಧೋನಿ ಸಸ್ಯಹಾರಿಯೋ, ಮಾಂಸಹಾರಿಯೋ? ಮಹಿ ಇಷ್ಟದ ಆಹಾರ ಬಗ್ಗೆ ಗುಟ್ಟು ಬಿಚ್ಚಿಟ್ಟ ಮಾಜಿ ರೂಮ್‌ಮೇಟ್!
ಐಪಿಎಲ್ ಮಿನಿ ಹರಾಜಿನಲ್ಲಿ ಅತಿಹೆಚ್ಚು ಮೊತ್ತಕ್ಕೆ ಬಿಡ್ ಆಗೋದು ಯಾರು? ಅಚ್ಚರಿ ಭವಿಷ್ಯ ನುಡಿದ AI