
ನವದೆಹಲಿ(ಮೇ.31): ಬಿಸಿಸಿಐ ಭಾರತ ಕ್ರಿಕೆಟ್ ತಂಡದ ಕೋಚ್ ಹುದ್ದೆಗೆ ಹೊಸದಾಗಿ ಅರ್ಜಿಗಳನ್ನು ಆಹ್ವಾನಿಸಲು ವಿರಾಟ್ ಕೊಹ್ಲಿ ಕಾರಣ ಎಂದು ಮೂಲಗಳು ತಿಳಿಸಿವೆ. ಹಾಲಿ ಕೋಚ್ ಅನಿಲ್ ಕುಂಬ್ಳೆ ಜತೆ ಕೆಲಸ ಮಾಡಲು ಕೊಹ್ಲಿಗೆ ಕಷ್ಟವಾಗುತ್ತಿದೆ. ಯಾವುದೇ ನಿರ್ಧಾರ ಕೈಗೊಳ್ಳಬೇಕಿದ್ದರೂ ಕುಂಬ್ಳೆ, ಕೊಹ್ಲಿಯ ಸಲಹೆಯನ್ನು ಪರಿಗಣಿಸುವುದಿಲ್ಲ ಎಂದು ಹೇಳಲಾಗಿದೆ. ಆಸ್ಟ್ರೇಲಿಯಾ ವಿರುದ್ಧ ಧರ್ಮಶಾಲಾ ಟೆಸ್ಟ್ ವೇಳೆ ಗಾಯಾಳು ವಿರಾಟ್ ಬದಲಿಗೆ ಕುಲ್ದೀಪ್ ಯಾದವ್ ಅವರನ್ನು ಆಡಿಸುವ ನಿರ್ಧಾರವನ್ನು ಕುಂಬ್ಳೆ ತೆಗೆದುಕೊಂಡಿದ್ದರು, ಆದರೆ ಈ ಬಗ್ಗೆ ಕೊಹ್ಲಿಗೆ ಮಾಹಿತಿಯೇ ಇರಲಿಲ್ಲ. ಕೋಚ್ ನಿರ್ಧಾರ, ಕೊಹ್ಲಿಗೆ ಅಚ್ಚರಿ ಮೂಡಿಸಿತ್ತು ಎನ್ನಲಾಗಿದೆ. ಮತ್ತೊಂದೆಡೆ, ಕುಂಬ್ಳೆ ಹಾಗೂ ಕೊಹ್ಲಿ ನಡುವೆ ಬಿಸಿಸಿಐ ಸಲಹಾ ಸಮಿತಿ ಸದಸ್ಯರಾದ ಸಚಿನ್, ಗಂಗೂಲಿ ಹಾಗೂ ಲಕ್ಷ್ಮಣ್ ಸಂಧಾನ ನಡೆಸಲಿದ್ದಾರೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.