
ಧರ್ಮಾಶಾಲ(ಅ.16): ಟೀಂ ಇಂಡಿಯಾವನ್ನು ಎಲ್ಲಾ ಮಾದರಿಯಲ್ಲಿ ವಿರಾಟ್ ಕೊಹ್ಲಿ ಮುನ್ನಡೆಸಬೇಕೆಂಬ ಮಾತುಗಳು ಕೇಳಿ ಬರ್ತಿವೆ. ಇದರ ಬೆನ್ನಲೇ ಟೀಮ್ ಇಂಡಿಯಾ ನಾಯಕ ಧೋನಿ ಕೊಹ್ಲಿ ಕುರಿತಂತೆ ಮಾತನಾಡಿದ್ದಾರೆ.
ಪಂದ್ಯ ನಡೆಯುವ ಸಂದರ್ಭದಲ್ಲಿ ಮೈದಾನದಲ್ಲಿ ಈಗಾಗಲೇ ಕೊಹ್ಲಿಯ ಬುದ್ದಿವಂತಿಕೆ ಬಳಿಸಿಕೊಂಡಿದ್ದಾಗಿ ಧೋನಿ ಬಹಿರಂಗಪಡಿಸಿದ್ದಾರೆ. ಇದರಿಂದ ತಂಡಕ್ಕೆ ಸಹಾಯವಾಗಿದೆ ಎನ್ನುವುದನ್ನು ಒತ್ತಿ ಹೇಳಿದ್ದಾರೆ.
ಕೊಹ್ಲಿ ಸಲಹೆ-ಸೂಚನೆಗಳನ್ನು ಮೈದಾನದಲ್ಲಿ ಅನೇಕ ವೇಳೆ ನಾನು ಕಾರ್ಯರೂಪಕ್ಕೆ ತಂದಿದ್ದೇನೆ. ನಿಮಗೆ ಸಾಕ್ಷಿ ಏನಾದ್ರೂ ಬೇಕಾದ್ರೆ ಹಿಂದಿನ ಪಂದ್ಯಗಳನ್ನು ಗಮನಿಸಿ. ಏಕೆಂದ್ರೆ ಇಬ್ಬರು ಒಟ್ಟಾಗಿ ಯೋಚಿಸುವುದರಿಂದ ಹೆಚ್ಚು ಲಾಭವಾಗುತ್ತದೆ ಎಂಬ ಅರ್ಥದಲ್ಲಿ ಧೋನಿ ತಿಳಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.