
ಕೊಲಂಬೋ(ಜು.12): ಮೂರು ಮಾದರಿಯ ಕ್ರಿಕೆಟ್ ನಾಯಕತ್ವಕ್ಕೆ ಆ್ಯಂಜಲೋ ಮ್ಯಾಥ್ಯೂಸ್ ರಾಜೀನಾಮೆ ನೀಡಿ ದಿನ ಕಳೆಯುವುದರೊಳಗಾಗಿ ಶ್ರೀಲಂಕಾ ತಂಡಕ್ಕೆ ನೂತನ ನಾಯಕರನ್ನು ನೇಮಕ ಮಾಡಲಾಗಿದೆ.
ಹಿರಿಯ ಆರಂಭಿಕ ಬ್ಯಾಟ್ಸ್'ಮನ್ ಉಪುಲ್ ತರಂಗ ಏಕದಿನ ಹಾಗೂ ಟಿ20 ತಂಡವನ್ನು ಮುನ್ನಡೆಸಿದರೆ, ದಿನೇಶ್ ಚಂಡಿಮಾಲ್ ಶ್ರೀಲಂಕಾ ಟೆಸ್ಟ್ ತಂಡದ ನಾಯಕರಾಗಿ ಆಯ್ಕೆಯಾಗಿದ್ದಾರೆ.
ರಂಗನಾ ಹೆರಾತ್ ಬಿಟ್ಟರೆ ಶ್ರೀಲಂಕಾ ಪರ ಅನುಭವಿ ಆಟಗಾರನೆನಿಸಿಕೊಂಡಿರುವ ಚಂಡಿಮಾಲ್, ಜಿಂಬಾಬ್ವೆ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಿಂದ ತಮ್ಮ ಹೊಸ ಜವಬ್ದಾರಿ ಹೊರಲಿದ್ದಾರೆ.
ಇನ್ನು ಎಡಗೈ ಆರಂಭಿಕ ಬ್ಯಾಟ್ಸ್'ಮನ್ ಉಪುಲ್ ತರಂಗ ಭಾರತದ ವಿರುದ್ಧದ ಏಕದಿನ ಸರಣಿಯಿಂದ ತಂಡವನ್ನು ಮುನ್ನಡೆಸಲಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.