ರಾಜಸ್ಥಾನ ರಾಯಲ್ಸ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ

Published : Apr 20, 2019, 01:28 PM IST
ರಾಜಸ್ಥಾನ ರಾಯಲ್ಸ್‌ಗೆ ಮಾಡು ಇಲ್ಲವೇ ಮಡಿ ಪಂದ್ಯ

ಸಾರಾಂಶ

ಚೊಚ್ಚಲ ಆವೃತ್ತಿಯ ಐಪಿಎಲ್ ಚಾಂಪಿಯನ್ ರಾಜಸ್ಥಾನ ರಾಯಲ್ಸ್ ತಂಡ ಪ್ಲೇ ಆಫ್ ಹಂತ ಪ್ರವೇಶಿಸಲು ತಿಣುಕಾಡುತ್ತಿದ್ದು, ಬಲಿಷ್ಠ ಮುಂಬೈ ಇಂಡಿಯನ್ಸ್ ಎದುರು ಮಾಡು ಇಲ್ಲವೇ ಮಡಿ ಕದನಕ್ಕೆ ಸಜ್ಜಾಗಿದೆ.

ಜೈಪುರ(ಏ.20): ಸಮಯ ಓಡುತ್ತಿದ್ದು ರಾಜಸ್ಥಾನ ರಾಯಲ್ಸ್‌ ಪ್ಲೇ-ಆಫ್‌ ರೇಸ್‌ನಲ್ಲಿ ಉಳಿದುಕೊಳ್ಳಲು ಎದುರಾಳಿ ವಿರುದ್ಧ ಮಾತ್ರವಲ್ಲ, ಕೆಲ ಆಂತರಿಕ ಸಮಸ್ಯೆಗಳ ವಿರುದ್ಧವೂ ಹೋರಾಡಬೇಕಿದೆ. 
ಶನಿವಾರ ಇಲ್ಲಿನ ಸವಾಯ್‌ ಮಾನ್‌ಸಿಂಗ್‌ ಕ್ರೀಡಾಂಗಣದಲ್ಲಿ ಮುಂಬೈ ಇಂಡಿಯನ್ಸ್‌ ವಿರುದ್ಧ ಸೆಣಸಲಿರುವ ರಾಯಲ್ಸ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. 8 ಪಂದ್ಯಗಳಲ್ಲಿ 6ರಲ್ಲಿ ಸೋತಿರುವ ರಾಜಸ್ಥಾನ, ಪ್ಲೇ-ಆಫ್‌ಗೇರಬೇಕಿದ್ದರೆ ಇನ್ನುಳಿದ ಆರೂ ಪಂದ್ಯಗಳಲ್ಲಿ ಗೆಲ್ಲಬೇಕು. ಜತೆಗೆ ಉತ್ತಮ ನೆಟ್‌ ರನ್‌ರೇಟ್‌ ಸಹ ಸಾಧಿಸಬೇಕಿದೆ. ಬ್ಯಾಟಿಂಗ್‌, ಬೌಲಿಂಗ್‌ ಹಾಗೂ ಕ್ಷೇತ್ರರಕ್ಷಣೆ ಮೂರೂ ವಿಭಾಗದಲ್ಲಿ ತಂಡ ಎಡವುತ್ತಿದೆ.

ಮತ್ತೊಂದೆಡೆ ಟೂರ್ನಿ ಪ್ರಮುಖ ಹಂತ ತಲುಪುತ್ತಿದ್ದಂತೆ ಲಯ ಕಂಡುಕೊಂಡಿರುವ ಮುಂಬೈ, ಈ ಪಂದ್ಯದಲ್ಲಿ ಗೆದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಲಿದೆ. ರೋಹಿತ್‌ ಶರ್ಮಾ ಹಾಗೂ ಕ್ವಿಂಟನ್‌ ಡಿ ಕಾಕ್‌ ಸ್ಫೋಟಕ ಆಟವಾಡುತ್ತಿದ್ದಾರೆ. ಪಾಂಡ್ಯ ಸಹೋದರರು, ಬುಮ್ರಾ ಹಾಗೂ ಮಾಲಿಂಗ ಭರ್ಜರಿ ಲಯದಲ್ಲಿದ್ದು, ತಂಡದ ಯಶಸ್ಸಿಗೆ ನೆರವಾಗುತ್ತಿದ್ದಾರೆ.

ಪಿಚ್‌ ರಿಪೋರ್ಟ್‌

ಸವಾಯ್‌ ಮಾನ್‌ಸಿಂಗ್‌ ಕ್ರೀಡಾಂಗಣದ ಪಿಚ್‌ನಲ್ಲಿ ರನ್‌ ಗಳಿಸುವುದು ಸುಲಭವಲ್ಲ. ಇಲ್ಲಿ ಈ ವರ್ಷ ನಡೆದಿರುವ 4 ಪಂದ್ಯಗಳಲ್ಲಿ ದೊಡ್ಡ ಮೊತ್ತ ದಾಖಲಾಗಿಲ್ಲ. 4 ಪಂದ್ಯಗಳ ಪೈಕಿ 3ರಲ್ಲಿ 2ನೇ ಬ್ಯಾಟಿಂಗ್‌ ನಡೆಸಿದ ತಂಡ ಗೆಲುವು ಸಾಧಿಸಿದೆ. ಸ್ಪಿನ್ನರ್‌ಗಳು ಪ್ರಮುಖ ಪಾತ್ರ ವಹಿಸಲಿದ್ದಾರೆ.

ಒಟ್ಟು ಮುಖಾಮುಖಿ: 19

ರಾಜಸ್ಥಾನ: 09

ಮುಂಬೈ: 10

ಸಂಭವನೀಯ ಆಟಗಾರರ ಪಟ್ಟಿ

ರಾಜಸ್ಥಾನ: ತ್ರಿಪಾಠಿ, ಬಟ್ಲರ್‌, ಸ್ಯಾಮ್ಸನ್‌, ರಹಾನೆ (ನಾಯಕ), ಟರ್ನರ್‌, ಆರ್ಚರ್‌, ಬಿನ್ನಿ, ಶ್ರೇಯಸ್‌, ಉನಾದ್ಕತ್‌, ಕುಲಕರ್ಣಿ, ಸೋಧಿ.

ಮುಂಬೈ: ರೋಹಿತ್‌ (ನಾಯಕ), ಡಿಕಾಕ್‌, ಕಟ್ಟಿಂಗ್‌, ಸೂರ್ಯ, ಕೃನಾಲ್‌, ಹಾರ್ದಿಕ್‌, ಪೊಲ್ಲಾರ್ಡ್‌, ಚಾಹರ್‌, ಜಯಂತ್‌, ಬುಮ್ರಾ, ಮಾಲಿಂಗ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಪ್‌ ತುಳಿತ ತನಿಖಾ ವರದಿ ಹೈಕೋರ್ಟ್‌ ಪರಾಮರ್ಶೆಗೆ
ದೇಶದ ಅಗ್ರ ಟಿ20 ಟೂರ್ನಿಯಲ್ಲೇ ಮ್ಯಾಚ್‌ ಫಿಕ್ಸಿಂಗ್‌, ನಾಲ್ವರು ಕ್ರಿಕೆಟಿಗರ ಸಸ್ಪೆಂಡ್‌ ಮಾಡಿ ತನಿಖೆಗೆ ಆದೇಶಿಸಿದ ಬಿಸಿಸಿಐ!