
ಜೂನ್ ಒಂದರಿಂದ ಆರಂಭವಾಗಲಿರುವ ಚಾಂಪಿಯನ್ಸ್ ಟ್ರೋಫಿಗೆ ಪ್ರಕಟಗೊಂಡಿರುವ ಭಾರತ ತಂಡದಲ್ಲಿ ಅನುಭವಿ ಆಟಗಾರ ಹಾಗೂ ವಿಕೆಟ್ ಕೀಪರ್ ಪಾರ್ಥೀವ್ ಪಟೇಲ್ ಸ್ಥಾನ ಪಡೆದಿಲ್ಲ. ಆದರೆ, ಇದು ಅವರಿಗೆ ಬೇಸರ ತಂದಿಲ್ಲವಂತೆ. ಹಾಗೆಂದು ಅವರೇ ಹೇಳಿಕೊಂಡಿದ್ದಾರೆ. ಭಾರತ ತಂಡದಲ್ಲಿ ಸ್ಥಾನ ಪಡೆಯದಿದ್ದಕ್ಕೆ ಬೇಸರವಾಗಿದೆಯೇ ಎಂದು ಪ್ರಶ್ನಿಸಿದ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರು, ''ನಾನು ಭಾರತ ತಂಡದಲ್ಲಿ ಸ್ಥಾನ ಸಿಗಲಿ ಎಂದು ಕ್ರಿಕೆಟ್ ಆಡುವುದಿಲ್ಲ. ನನ್ನ ಆತ್ಮ ತೃಪ್ತಿಗೆ ಆಡುತ್ತೇನೆ. ಸ್ಥಾನ ಸಿಗದಿದ್ದರೂ ಚಿಂತೆಯಿಲ್ಲ'' ಎಂದು ಅವರು ವಿವರಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.