
ಬೆಂಗಳೂರು(ನ.21): ಕಳೆದ ತಿಂಗಳು ಇಂಡೋನೇಷ್ಯಾದಲ್ಲಿ ನಡೆದ ಪ್ಯಾರಾ ಏಷ್ಯನ್ ಗೇಮ್ಸ್ನಲ್ಲಿ 9 ಪದಕ ಗೆದ್ದ ರಾಜ್ಯದ ಅಥ್ಲೀಟ್ಗಳನ್ನು ಉಪಮುಖ್ಯಮಂತ್ರಿ ಹಾಗೂ ಕ್ರೀಡಾ ಸಚಿವ ಡಾ.ಜಿ.ಪರಮೇಶ್ವರ್ ಮಂಗಳವಾರ(ನ.20) ಸನ್ಮಾನಿಸಿದರು.
ತಮ್ಮ ಗೃಹಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಚಿನ್ನ ವಿಜೇತೆ ರಕ್ಷಿತಾ ಆರ್., ಬೆಳ್ಳಿ ಮತ್ತು ಕಂಚಿನ ಪದಕ ವಿಜೇತೆ ವಿ.ರಾಧಾ, ಕಂಚಿನ ಪದಕ ಗೆದ್ದ ಜಾವೆಲಿನ್ ಥ್ರೋ ಪಟು ಎನ್.ಎಸ್.ರಮ್ಯಾ, ಕಂಚು ಗೆದ್ದಿರುವ ಬ್ಯಾಡ್ಮಿಂಟನ್ ಆಟಗಾರ ಆನಂದ್ಕುಮಾರ್, ಚಿನ್ನ ವಿಜೇತ ಚೆಸ್ಪಟು ಕಿಶನ್ ಗಂಗೊಳ್ಳಿ, ಪವರ್ ಲಿಫ್ಟಿಂಗ್ನಲ್ಲಿ ಬೆಳ್ಳಿ ವಿಜೇತ ಫರ್ಮಾನ್ ಬಾಷಾ ಹಾಗೂ ಸಕೀನಾ ಖಾಟೂನ್ರನ್ನು ಪರಮೇಶ್ವರ್ ಅಭಿನಂದಿಸಿದರು.
‘ಪ್ಯಾರಾ ಅಥ್ಲೀಟ್ಗಳು ಸರ್ಕಾರದ ಮುಂದಿಟ್ಟಿರುವ ಪ್ರತ್ಯೇಕ ಕ್ರೀಡಾಂಗಣ ಬೇಡಿಕೆಯನ್ನು ಗಂಭೀರವಾಗಿ ಪರಿಗಣಿಸಲಾಗುವುದು. ಕ್ರೀಡಾಳುಗಳಿಗೆ ಸರ್ಕಾರದ ಪ್ರೋತ್ಸಾಹ ಸದಾ ಇರುತ್ತದೆ’ ಎಂದು ಪರಮೇಶ್ವರ್ ಹೇಳಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.