ಸುಳ್‌ಸುದ್ದಿ: ಡಕ್‌ವರ್ತ್ ಲೂಯಿಸ್ ವಿರುದ್ದ ಕಠಿಣ ಕ್ರಮ-ರಾಜನಾಥ್

Published : Nov 22, 2018, 10:58 AM ISTUpdated : Nov 22, 2018, 11:34 AM IST
ಸುಳ್‌ಸುದ್ದಿ: ಡಕ್‌ವರ್ತ್ ಲೂಯಿಸ್ ವಿರುದ್ದ ಕಠಿಣ ಕ್ರಮ-ರಾಜನಾಥ್

ಸಾರಾಂಶ

ಇದು ಸುಳ್‌ಸುದ್ದಿ:  ಆಸ್ಟ್ರೇಲಿಯಾ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತದ ಸೋಲಿಗೆ ಡಕ್‌ವರ್ತ್ ನಿಯಮವೇ ಕಾರಣ ಅನ್ನೋದು ಅಭಿಮಾನಿಗಳ ಆರೋಪ. ಇದೀಗ ಡಕ್‌ವರ್ತ್ ನಿಯಮದ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕೇಂದ್ರ ಸರ್ಕಾರ ಮುಂದಾಗಿದೆ.

ಸುಳ್‌ಸುದ್ದಿ(ನ.22): ಆಸ್ಪ್ರೇಲಿಯಾ ವಿರುದ್ಧದ ಮೊದಲ ಟಿ20 ಕ್ರಿಕೆಟ್‌ ಪಂದ್ಯದಲ್ಲಿ ಭಾರತದ ಸೋಲಿಗೆ ಕಾರಣರಾದ ಡಕ್‌ವರ್ತ್ ಮತ್ತು ಲೂಯಿಸ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್‌ ತಿಳಿಸಿದ್ದಾರೆ. 

ಭಾರತ ಹೆಚ್ಚು ರನ್‌ ಗಳಿಸಿದ್ದರೂ ಡಕ್‌ವರ್ತ್ ಲೂಯಿಸ್‌ ನಿಯಮದಿಂದಾಗಿ ಆಸ್ಪ್ರೇಲಿಯಾ ಗೆದ್ದಿದೆ. ಇದು ಭಾರತೀಯ ಕ್ರಿಕೆಟ್‌ಗೆ ಮಾರಕವಾಗಿ ಪರಿಣಮಿಸಿದೆ. ಹೀಗಾಗಿ ಆದಷ್ಟುಶೀಘ್ರ ಡಕ್‌ವತ್‌ರ್‍ ಮತ್ತು ಲೂಯಿಸ್‌ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಸುಳ್‌ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. 

ಈ ಹಿಂದೆ ವಿಜಯ್‌ ಮಲ್ಯ, ನೀರವ್‌ ಮೋದಿ, ಲಲಿತ್‌ ಮೋದಿ, ದಾವೂದ್‌ ಇಬ್ರಾಹಿಂ, ಚೋಟಾ ರಾಜನ್‌, ಹಫೀಜ್‌ ಸಯೀದ್‌ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ರಾಜನಾಥ್‌ ಹೇಳಿದ್ದನ್ನು ಇಲ್ಲಿ ಸ್ಮರಿಸಬಹುದು.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL 2026: ಐಪಿಎಲ್ ಆರಂಭಕ್ಕೂ ಮುನ್ನ ಅಭ್ಯಾಸ ಪಂದ್ಯದಲ್ಲಿ ಅಬ್ಬರಿಸಿ ಬೊಬ್ಬಿರಿದ ಕಿಂಗ್‌ ಕೊಹ್ಲಿ!
ಐಪಿಎಲ್ ಪ್ರೇಮಿಗಳಿಗೆ ನಮ್ಮ ಮೆಟ್ರೋ ಸಿಹಿ ಸುದ್ದಿ: ಪಂದ್ಯದ ದಿನ ಮುಂಜಾನೆ 2 ಗಂಟೆಯವರೆಗೆ ರೈಲು ಸಂಚಾರ