
ಬೆಂಗಳೂರು(ಮಾ.29): ಮುಂಬೈ ವಿರುದ್ಧ ನಡೆದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮುಗ್ಗರಿಸಿರುವುದು ಅಭಿಮಾನಿಗಳ ಬೇಸರಕ್ಕೆ ಕಾರಣವಾಗಿದೆ. ತವರಿನಲ್ಲಿ ವಿರೋಚಿತ ಸೋಲಿನಿಂದ ಸತತ 2 ಪಂದ್ಯಗಳನ್ನು RCB ಕೈಚೆಲ್ಲಿದೆ. ಈ ಪಂದ್ಯ RCB ಸ್ಪಿನ್ನರ್ ಯಜುವೇಂದ್ರ ಚಹಾಲ್ ಪಾಲಿಗೆ ಸ್ಮರಣೀಯವಾಗಿತ್ತು.
ಇದನ್ನೂ ಓದಿ: ಕೊನೆ ಎಸೆತ ನೋ ಬಾಲ್: ಅಂಪೈರ್ ಮೇಲೆ ಕ್ರಿಕೆಟಿಗರು ಸಿಡಿಮಿಡಿ
ಚಹಾಲ್ 4 ವಿಕೆಟ್ ಕಬಳಿಸಿ ಯಶಸ್ವಿ ಬೌಲರ್ ಎನಿಸಿಕೊಂಡಿದ್ದರು. ಆದರೆ ಒಂದು ಹಂತದಲ್ಲಿ ಚಹಾಲ್ ನಡುಗಿ ಹೋಗಿದ್ದರು. ಯುವರಾಜ್ ಸಿಂಗ್ ಅಬ್ಬರಿಸಲು ಆರಂಭಿಸಿದ್ದರು. ಈ ವೇಳೆ ಬೌಲಿಂಗ್ ಮಾಡಿದ ಚಹಾಲ್ಗೆ ಯುವಿ ಸತತ 3 ಸಿಕ್ಸರ್ ಸಿಡಿಸಿದರು. ಈ ವೇಳೆ ಚಹಾಲ್ಗೆ ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ನೆನಪಾಗಿತ್ತು.
2007ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ವಿರುದ್ಧ ಯುವರಾಜ್ ಸಿಂಗ್ ಸ್ಫೋಟಕ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದರು. ಈ ವೇಳೆ ಬೌಲಿಂಗ್ ಮಾಡಿದ ಸ್ಟುವರ್ಟ್ ಬ್ರಾಡ್ಗೆ ಹಿಗ್ಗಾ ಮುಗ್ಗಾ ಚಚ್ಚಿದ ಯುವಿ ಓವರ್ನ 6 ಎಸೆತಗಳನ್ನೂ ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದರು.
ಇದನ್ನೂ ಓದಿ:ಮತ್ತೆ ಬ್ಯಾಟ್ ಹಿಡಿದು ಘರ್ಜಿಸಿದ ಸೌರವ್ ಗಂಗೂಲಿ!
ಮುಂಬೈ ವಿರುದ್ಧ ಚಹಾಲ್ಗೂ ಇದೇ ಅನುಭವ ಆಗಿತ್ತು. ಆದರೆ ಯುವಿ 3 ಸಿಕ್ಸರ್ ಸಿಡಿಸಿ, ನಾಲ್ಕನೇ ಸಿಕ್ಸರ್ ಸಿಡಿಸೋ ವೇಳೆ ಬೌಂಡರಿ ಲೈನ್ ಬಳಿ ಕ್ಯಾಚ್ ನೀಡಿ ಪೆವಿಲಿಯನ್ ಸೇರಿಕೊಂಡರು. ಪಂದ್ಯದ ಬಳಿಕ ಯಜುವೇಂದ್ರ ಚಹಾಲ್ ಹೇಳಿಕೊಂಡಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.