ಮತ್ತೊಂದು ಅಗ್ನಿ ಪರೀಕ್ಷೆ ಎದುರಿಸಲು ರೆಡಿಯಾದ ಭಾರತದ ಯುವ ಪಡೆ

Published : Oct 09, 2017, 12:55 PM ISTUpdated : Apr 11, 2018, 12:47 PM IST
ಮತ್ತೊಂದು ಅಗ್ನಿ ಪರೀಕ್ಷೆ ಎದುರಿಸಲು ರೆಡಿಯಾದ ಭಾರತದ ಯುವ ಪಡೆ

ಸಾರಾಂಶ

ಇಲ್ಲಿನ ನೆಹರೂ ಕ್ರೀಡಾಂಗಣ ಪಂದ್ಯಕ್ಕೆ ಆತಿಥ್ಯ ವಹಿಸಲಿದ್ದು, ಭಾರತ ಮತ್ತೊಮ್ಮೆ ಬಲಿಷ್ಠ ಎದುರಾಳಿಯ ವಿರುದ್ಧ ತನ್ನ ಅದೃಷ್ಟ ಪರೀಕ್ಷೆ ನಡೆಸಲಿದೆ.

ನವದೆಹಲಿ(ಅ.9): ಮೊದಲ ಪಂದ್ಯದಲ್ಲಿ ಯುಎಸ್‌ಎ ವಿರುದ್ಧ 0-3 ಗೋಲುಗಳಿಂದ ಸೋತರೂ ಅಭಿಮಾನಿಗಳ ಮನ ಸೆಳೆದಿದ್ದ ಭಾರತ ತಂಡ, ಇಂದು ನಡೆಯಲಿರುವ ಅಂಡರ್-17 ಫುಟ್ಬಾಲ್ ವಿಶ್ವಕಪ್ ‘ಎ’ ಗುಂಪಿನ ಪಂದ್ಯದಲ್ಲಿ ಕೊಲಂಬಿಯಾ ವಿರುದ್ಧ ಸೆಣಸಾಡಲಿದೆ.

ಇಲ್ಲಿನ ನೆಹರೂ ಕ್ರೀಡಾಂಗಣ ಪಂದ್ಯಕ್ಕೆ ಆತಿಥ್ಯ ವಹಿಸಲಿದ್ದು, ಭಾರತ ಮತ್ತೊಮ್ಮೆ ಬಲಿಷ್ಠ ಎದುರಾಳಿಯ ವಿರುದ್ಧ ತನ್ನ ಅದೃಷ್ಟ ಪರೀಕ್ಷೆ ನಡೆಸಲಿದೆ. ಪಂದ್ಯಾವಳಿಯಲ್ಲಿ ಮೊದಲ ಬಾರಿಗೆ ಆಡುತ್ತಿರುವ ನೈಜರ್ ತಂಡದಿಂದ ಭಾರತ ಸ್ಫೂರ್ತಿ ಪಡೆಯಬೇಕಿದೆ. ನೈಜರ್ ತನ್ನ ಚೊಚ್ಚಲ ಪಂದ್ಯದಲ್ಲಿ ಉ.ಕೊರಿಯಾ ವಿರುದ್ಧ ಜಯಭೇರಿ ಬಾರಿಸಿತ್ತು. ಆಫ್ರಿಕಾದ ತಂಡ ಜಯ ಸಾಧಿಸಿದಂತೆಯೇ ಭಾರತ ಸಹ ಗೆಲುವು ಪಡೆಯಲಿದೆ ಎನ್ನುವ ಚರ್ಚೆ ನಡೆಯುತ್ತಿದೆಯಾದರೂ ಅದು ಅಷ್ಟು ಸುಲಭವಲ್ಲ.

ದ.ಅಮೆರಿಕದ ಬಲಿಷ್ಠ ತಂಡಗಳಲ್ಲಿ ಒಂದಾದ ಕೊಲಂಬಿಯಾ, ತಾನಾಡಿದ ಮೊದಲ ಪಂದ್ಯದಲ್ಲಿ ಘಾನಾ ವಿರುದ್ಧ ಸೋಲು ಕಂಡಿತ್ತು. ಹೀಗಾಗಿ, ಮೊದಲ ಗೆಲುವಿಗಾಗಿ ಕೊಲಂಬಿಯಾ ಪಣ ತೊಟ್ಟಿದೆ. ‘ಕೊಲಂಬಿಯಾ ಬಲಿಷ್ಠ ತಂಡ. ನಮ್ಮನ್ನು ಸೋಲಿಸಲು ತಂಡ ಸಮರ್ಥವಾಗಿದೆ. ಆದರೆ ನಾವು ಹೋರಾಟ ಬಿಡುವುದಿಲ್ಲ’ ಎಂದು ಭಾರತದ ಕೋಚ್ ಲೂಯಿಸ್ ನಾರ್ಟನ್ ಹೇಳಿದ್ದಾರೆ.

ಪಂದ್ಯ ಆರಂಭ: ಸಂಜೆ 8ಕ್ಕೆ, ಪ್ರಸಾರ:

ಸೋನಿ ಟೆನ್ 3, ಡಿಡಿ ಸ್ಪೋರ್ಟ್ಸ್.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?