
ನವದೆಹಲಿ[ಆ.13]: ಭಾರತದ ಮಾಜಿ ಸ್ಫೋಟಕ ಬ್ಯಾಟ್ಸ್’ಮನ್ ವಿರೇಂದ್ರ ಸೆಹ್ವಾಗ್ ಅಚ್ಚರಿಯ ಬೆಳವಣಿಗೆಯಲ್ಲಿ ಭಾರತ ಕ್ರಿಕೆಟ್ ತಂಡದ ಆಯ್ಕೆಗಾರನಾಗಲು ಬಯಸಿರುವುದಾಗಿ ಹೇಳಿದ್ದಾರೆ.
ಸೆಹ್ವಾಗ್ ಪತ್ನಿಗೆ 4.5 ಕೋಟಿ ರೂ ವಂಚಿಸಿದ ಬಿಸ್ನೆಸ್ ಪಾರ್ಟ್ನರ್!
‘ನಾನು ಆಯ್ಕೆಗಾರನಾಗಬೇಕು. ಯಾರು ನನಗೆ ಅವಕಾಶ ನೀಡುತ್ತೀರಿ?’ ಎಂದು ಸೋಮವಾರ ಸೆಹ್ವಾಗ್ ಟ್ವೀಟ್ ಮಾಡಿದ್ದಾರೆ. ಎಂ.ಎಸ್.ಕೆ.ಪ್ರಸಾದ್ ಬಿಸಿಸಿಐನ ಹಾಲಿ ಆಯ್ಕೆಗಾರರಾಗಿದ್ದು, ಅಕ್ಟೋಬರ್ನಲ್ಲಿ ನಡೆಯಲಿರುವ ವಾರ್ಷಿಕ ಚುನಾವಣೆ ಬಳಿಕ ಅವರ ಕಾರ್ಯಾವಧಿ ಮುಕ್ತಾಯಗೊಳ್ಳಲಿದೆ.
ಟೀಂ ಇಂಡಿಯಾದ ಸ್ಫೋಟಕ ಆರಂಭಿಕ ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ನಿಲ್ಲುವ ವಿರೇಂದ್ರ ಸೆಹ್ವಾಗ್, ಟೆಸ್ಟ್ ಕ್ರಿಕೆಟ್’ನಲ್ಲಿ ಎರಡು ತ್ರಿಶತಕ ಸಿಡಿಸಿದ ಏಕೈಕ ಭಾರತೀಯ ಬ್ಯಾಟ್ಸ್’ಮನ್ ಎನ್ನುವ ದಾಖಲೆ ಬರೆದಿದ್ದಾರೆ. 2015ರ ಅಕ್ಟೋಬರ್’ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್’ಗೆ ವಿದಾಯ ಹೇಳಿರುವ ವೀರೂ, ಇದೀಗ ಟ್ವೀಟ್ ಮೂಲಕ ಅಭಿಮಾನಿಗಳಿಗೆ ಮನರಂಜನೆ ನೀಡುತ್ತಾ ಬರುತ್ತಿದ್ದಾರೆ.
ಕರ್ನಾಟಕ ಪ್ರವಾಹದ ಹೆಚ್ಚಿನ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.