
ನವದೆಹಲಿ[ಜ.17]: ಭಾರತ ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್, ಕರ್ನಾಟಕದ ಬಿ.ಪಿ.ಗೋವಿಂದ ನೇತೃತ್ವದ 13 ಸದಸ್ಯರನ್ನೊಳಗೊಂಡ ರಾಷ್ಟ್ರೀಯ ಆಯ್ಕೆ ಸಮಿತಿಗೆ ನೇಮಕಗೊಂಡಿದ್ದಾರೆ.
ಅಂತಾರಾಷ್ಟ್ರೀಯ ಹಾಕಿಗೆ ಸರ್ದಾರ್ ಗುಡ್ ಬೈ
‘ಭಾರತೀಯ ಹಾಕಿಗೆ ಸೇವೆ ಸಲ್ಲಿಸಲು ಸದಾ ಸಿದ್ಧವಾಗಿದ್ದೇನೆ. ಆಯ್ಕೆಗಾರನ ಜವಾಬ್ದಾರಿಯನ್ನು ಸ್ವೀಕರಿಸಿದ್ದೇನೆ. ಸವಾಲನ್ನು ಸಮರ್ಥವಾಗಿ ನಿಭಾಯಿಸಲಿದ್ದೇನೆ ಎನ್ನುವ ನಂಬಿಕೆ ಇದೆ’ ಎಂದು ಸರ್ದಾರ್ ಹೇಳಿದ್ದಾರೆ. ಆಯ್ಕೆ ಸಮಿತಿಯಲ್ಲಿ ಭಾರತದ ಮಾಜಿ ಆಟಗಾರ, ರಾಜ್ಯದ ಎ.ಬಿ.ಸುಬ್ಬಯ್ಯ ಸಹ ಇದ್ದಾರೆ. ಈ ಆಯ್ಕೆ ಸಮಿತಿ ಭಾರತ ಪುರುಷ ಹಾಗೂ ಮಹಿಳಾ ತಂಡಗಳನ್ನು ಆಯ್ಕೆ ಮಾಡಲಿದೆ.
2020ರ ಟೋಕಿಯೋ ಒಲಿಂಪಿಕ್ಸ್’ವರೆಗೆ ಭಾರತ ತಂಡವನ್ನು ಪ್ರತಿನಿಧಿಸಲು ಬಯಸಿದ್ದ ಸರ್ದಾರ್ ಸಿಂಗ್, ಕಳೆದ ವರ್ಷ ನಡೆದ ಏಷ್ಯನ್ ಗೇಮ್ಸ್’ನಲ್ಲಿ ಕಳಪೆ ಪ್ರದರ್ಶನದಿಂದಾಗಿ ತಂಡದಿಂದ ಹೊರಬಿದ್ದಿದ್ದರು. ಇದರ ಬೆನ್ನಲ್ಲೇ ಸರ್ದಾರ್ ದಿಢೀರ್ ನಿವೃತ್ತಿ ಘೋಷಿಸಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.