
ದೆಹಲಿ(ಡಿ.9): ಎಲ್ಲಾ ಮಾದರಿ ಕ್ರಿಕೆಟ್ನಿಂದ ವಿದಾಯ ಹೇಳಿದ ಗೌತಮ್ ಗಂಭೀರ್ ಇದೀಗ ಟೀಂ ಇಂಡಿಯಾದ ಒಂದೊಂದೆ ಸ್ಫೋಟಕ ಮಾಹಿತಿ ಬಹಿರಂಗ ಮಾಡುತ್ತಿದ್ದಾರೆ. ಧೋನಿ ನಾಯಕತ್ವ ವಿರುದ್ಧ ಹರಿಹಾಯ್ದು ಗಂಭೀರ್ ಇದೀಗ ಅತ್ಯುತ್ತಮ ನಾಯಕ ಯಾರು ಅನ್ನೋದನ್ನ ಬಹಿರಂಗ ಪಡಿಸಿದ್ದಾರೆ.
ಗೌತಮ್ ಗಂಭೀರ್ ಪ್ರಕಾರ ಟೀಂ ಇಂಡಿಯಾ ಕಂಡ ಅತ್ಯುತ್ತಮ ನಾಯಕ ಸೌರವ್ ಗಂಗೂಲಿಯೂ ಅಲ್ಲ, ಎಂ.ಎಸ್.ಧೋನಿಯೂ ಇಲ್ಲ. ಅದು ನಮ್ಮ ಕನ್ನಡಿಗ ಅನಿಲ್ ಕುಂಬ್ಳೆ ಎಂದು ಗಂಭೀರ್ ಖಾಸಗಿ ವಾಹಿನಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.
ಕುಂಬ್ಳೆ ಒಂದು ವರ್ಷ ಟೀಂ ಇಂಡಿಯಾದ ಸಾರಥ್ಯ ವಹಿಸಿದ್ದರು. ಕುಂಬ್ಳೆ ನಾಯಕತ್ವದಲ್ಲಿ ಗಂಭೀರ್ 5 ಟೆಸ್ಟ್ ಪಂದ್ಯ ಆಡಿದ್ದಾರೆ. ಕುಂಬ್ಳೆಯಿಂದ ಸಾಕಷ್ಟು ಕಲಿತಿದ್ದೇನೆ. ನಾನು ನೋಡಿದ ನಾಯಕರಲ್ಲಿ ಕುಂಬ್ಳೆ ಗ್ರೇಟ್ ಕ್ಯಾಪ್ಟನ್ ಎಂದಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.