
ಮುಂಬೈ(ಆ.14): ರಾಹುಲ್ ದ್ರಾವಿಡ್ ವಿರುದ್ಧ ಯಾವುದೇ ಸ್ವಹಿತಾಸಕ್ತಿ ದೂರಿಲ್ಲವೆಂದು ಸುಪ್ರೀಂ ಕೋರ್ಟ್ ನೇಮಿತ ಬಿಸಿಸಿಐ ಆಡಳಿತ ಸಮಿತಿ (ಸಿಒಎ) ಸ್ಪಷ್ಟಪಡಿಸಿದೆ. ಬೆಂಗಳೂರಲ್ಲಿರುವ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ನಿರ್ದೇಶಕರಾಗಿ ರಾಹುಲ್ ದ್ರಾವಿಡ್ ನೇಮಕಕ್ಕೂ ಹಸಿರು ನಿಶಾನೆ ತೋರಿದೆ.
ರಾಹುಲ್ ದ್ರಾವಿಡ್ಗೆ ನೋಟೀಸ್; BCCI ವಿರುದ್ಧ ಕ್ರಿಕೆಟಿಗರು ಗರಂ!
ಸಿಒಎ ಸದಸ್ಯ ಲೆಫ್ಟಿನೆಂಟ್ ಜನರಲ್ ರವಿ ತೊಗ್ಡೆ, ಪ್ರಕರಣದ ಅಂತಿಮ ತೀರ್ಪನ್ನು ಬಿಸಿಸಿಐ ಸಾರ್ವಜನಿಕ ತನಿಖಾಧಿಕಾರಿ-ನೈತಿಕ ಅಧಿಕಾರಿ ಡಿ.ಕೆ.ಜೈನ್ ನೀಡಲಿದ್ದಾರೆ ಎಂದಿದ್ದಾರೆ. ದ್ರಾವಿಡ್ ಮೇಲೆ ಕೇಳಿ ಬಂದಿದ್ದ ಸ್ವಹಿತಾಸಕ್ತಿ ಆರೋಪದ ಬಗ್ಗೆ ಮಾಜಿ ಕ್ರಿಕೆಟಿಗರಾದ ಸೌರವ್ ಗಂಗೂಲಿ, ಅನಿಲ್ ಕುಂಬ್ಳೆ ಮುಂತಾದವರು ಅಸಮಾಧಾನ ವ್ಯಕ್ತಪಡಿಸಿದ್ದರು.
ಎಲ್ಲಾ ವೃತ್ತಿಗೂ ಹಿತಾಸಕ್ತಿ ಸಂಘರ್ಷವಿದೆ: ಕುಂಬ್ಳೆ
ದ್ರಾವಿಡ್ ಇಂಡಿಯಾ ಸಿಮೆಂಟ್ಸ್ ಸಂಸ್ಥೆಯ ಉಪಾಧ್ಯಕ್ಷ ಸಹ ಆಗಿರುವ ಕಾರಣ ಅವರ ವಿರುದ್ಧ ಸ್ವಹಿತಾಸಕ್ತಿ ಆರೋಪ ಕೇಳಿಬಂದಿತ್ತು. ದ್ರಾವಿಡ್ ಅನಿರ್ದಿಷ್ಟಾವಧಿ ರಜೆ ಪಡೆದಿದ್ದು, ಎನ್ಸಿಎ ನಿರ್ದೇಶಕ ಹುದ್ದೆಯಲ್ಲಿ ಇರುವವರೆಗೂ ಇಂಡಿಯಾ ಸಿಮೆಂಟ್ಸ್ನಿಂದ ವೇತನ ಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.