ಕಳಪೆ ಪ್ರದರ್ಶನ ಸಮರ್ಥಿಸಿದ ಕೋಚ್ ರವಿ ಶಾಸ್ತ್ರಿ ವಿರುದ್ಧ ಆಕ್ರೋಶ!

Published : Sep 13, 2018, 08:55 PM ISTUpdated : Sep 19, 2018, 09:25 AM IST
ಕಳಪೆ ಪ್ರದರ್ಶನ ಸಮರ್ಥಿಸಿದ ಕೋಚ್ ರವಿ ಶಾಸ್ತ್ರಿ ವಿರುದ್ಧ ಆಕ್ರೋಶ!

ಸಾರಾಂಶ

ಇಂಗ್ಲೆಂಡ್ ವಿರುದ್ಧ ಕಳಪೆ ಪ್ರದರ್ಶನ ನೀಡಿದ ಟೀಂ ಇಂಡಿಯಾ 1-4 ಅಂತರದ ಸೋಲು ಅನುಭವಿಸಿತ್ತು. ಆದರೆ ಟೀಂ ಇಂಡಿಯಾದ ಕಳಪೆ ಪ್ರದರ್ಶನವನ್ನ ಸಮರ್ಥಿಸಿಕೊಂಡ ಕೋಚ್ ರವಿ ಶಾಸ್ತ್ರಿ ವಿರುದ್ಧ ಮಾಜಿ ಕ್ರಿಕೆಟಿಗರು ಹೇಳಿದ್ದೇನು? ಇಲ್ಲಿದೆ.

ದುಬೈ(ಸೆ.13): ಇಂಗ್ಲೆಂಡ್ ವಿರುದ್ದದ ಟೆಸ್ಟ್ ಸರಣಿ ಸೋತ ಟೀಂ ಇಂಡಿಯಾ ಇದೀಗ ಏಷ್ಯಾಕಪ್ ಸರಣಿಗೆ ತಯಾರಿ ಆರಂಭಿಸಿದೆ. ಆದರೆ ಆಂಗ್ಲರ ವಿರುದ್ಧದ ಸರಣಿ ಸೋಲು ಮಾತ್ರ ಭಾರತೀಯ ಅಭಿಮಾನಿಗಳಿಗೆ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

1-4 ಅಂತರದಲ್ಲಿ ಟೀಂ ಇಂಡಿಯಾ ಟೆಸ್ಟ್ ಸರಣಿ ಸೋಲಿಗೆ ಕಳಪೆ ಬ್ಯಾಟಿಂಗ್ ಪ್ರದರ್ಶನವೇ ಪ್ರಮುಖ ಕಾರಣ. ಇದರ ಜೊತೆಗೆ ಪ್ಲೇಯಿಂಗ್ ಇಲೆವೆನ್ ಆಯ್ಕೆ ಸೇರಿದಂತೆ ಹಲವು ಕಾರಣಗಳು ತಂಡಕ್ಕೆ ಹಿನ್ನಡೆಯಾಗಿದೆ. ಆದರೆ ಕೋಚ್ ರವಿ ಶಾಸ್ತ್ರಿ ತಂಡದ ಪ್ರದರ್ಶನವನ್ನ ಸಮರ್ಥಿಸಿಕೊಂಡಿದ್ದಾರೆ.

ಕಳಪೆ ಪ್ರದರ್ಶನವನ್ನ ಸಮರ್ಥಿಸಿಕೊಂಡ ರವಿ ಶಾಸ್ತ್ರಿ ವಿರುದ್ದ ಟೀಂ ಇಂಡಿಯಾ ಮಾಜಿ ಕ್ರಿಕೆಟಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶಾಸ್ತ್ರಿ ಅಪ್ರಬುದ್ಧ ಕೋಚ್ ಎಂದು ಮಾಜಿ ನಾಯಕ ಸೌರವ್ ಗಂಗೂಲಿ ಹೇಳಿದ್ದಾರೆ.

1980 ಹಾಗೂ 2007ರಲ್ಲಿ ಟೀಂ ಇಂಡಿಯಾ ಇಂಗ್ಲೆಂಡ್ ನೆಲದಲ್ಲಿ ಸರಣಿ ಗೆದ್ದಿತ್ತು. ಆದರೆ ಬಲಿಷ್ಠ ಟೀಂ ಇಂಡಿಯಾ 2018ರಲ್ಲಿ ಕಳಪೆ ಪ್ರದರ್ಶನ ನೀಡಿದೆ ಎಂದು ಮಾಜಿ ನಾಯಕ ಸುನಿಲ್ ಗವಾಸ್ಕರ್ ಹೇಳಿದ್ದಾರೆ.

ತಂಡ ಪ್ರದರ್ಶನ ಅತ್ಯುತ್ತಮ ತಂಡ ಅನ್ನೋದನ್ನ ಸಾರಿ ಹೇಳಬೇಕೆ ಹೊರತು, ಡ್ರೆಸ್ಸಿಂಗ್ ರೂಂ ಹಾಗೂ ಮಾಧ್ಯಮಗಳಲ್ಲಿನ ಹೇಳಿಕೆಗಳು ಅಲ್ಲ ಎಂದು ಕೋಚ್ ರವಿ ಶಾಸ್ತ್ರಿ ವಿರುದ್ಧ ಮಾಜಿ ಕ್ರಿಕೆಟಿಗ ವೀರೇಂದ್ರ ಸೆಹ್ವಾಗ್ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಮಾಜಿ ಕ್ರಿಕೆಟಿಗರ ಜೊತೆ ಹಲವು ಕ್ರಿಕೆಟಿಗರು ಶಾಸ್ತ್ರಿ ವಿರುದ್ಧ ಅಸಮಧಾನ ವ್ಯಕ್ತಪಡಿಸಿದ್ದಾರೆ. ಸೆಪ್ಟೆಂಬರ್ 15 ರಿಂದ ಪ್ರತಿಷ್ಠಿತ ಏಷ್ಯಾಕಪ್ ಟೂರ್ನಿ ಆರಂಭಗೊಳ್ಳಲಿದೆ. ಈಗಲೇ ಒತ್ತಡದಲ್ಲಿರುವ ಕೋಚ್ ಶಾಸ್ತ್ರಿ ಭವಿಷ್ಯ  ಏಷ್ಯಾಕಪ್ ಟೂರ್ನಿ ನಿರ್ಧರಿಸಲಿದೆ.
 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

IPL Mini Auction: ಎಲ್ಲಾ ಐಪಿಎಲ್ ತಂಡಗಳ ಅವಶ್ಯಕತೆ ಏನು? ಯಾರ ಬಳಿ ಎಷ್ಟಿದೆ ಹಣ?
Good News for RCB Fans: ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ? KSCA-BCCI ಮಾತುಕತೆ