ಮಾಜಿ ಕ್ರಿಕೆಟಿಗ ವಿ.ಬಿ.ಚಂದ್ರಶೇಖರ್‌ ನಿಧನ: ಕುಂಬ್ಳೆ ಕಂಬನಿ

Published : Aug 16, 2019, 11:55 AM ISTUpdated : Aug 16, 2019, 12:21 PM IST
ಮಾಜಿ ಕ್ರಿಕೆಟಿಗ ವಿ.ಬಿ.ಚಂದ್ರಶೇಖರ್‌ ನಿಧನ: ಕುಂಬ್ಳೆ ಕಂಬನಿ

ಸಾರಾಂಶ

ಟೀಂ ಇಂಡಿಯಾ ಮಾಜಿ ಕ್ರಿಕೆಟಿಗ ವಿ.ಬಿ ಚಂದ್ರಶೇಖರ್ ಸಾಲಬಾಧೆ ತಾಳಲಾರದೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...

ಚೆನ್ನೈ(ಆ.16): ಭಾರತದ ಮಾಜಿ ಕ್ರಿಕೆಟಿಗ ಹಾಗೂ ರಾಷ್ಟ್ರೀಯ ಆಯ್ಕೆಗಾರ ವಿ.ಬಿ.ಚಂದ್ರಶೇಖರ್‌ ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರಿಗೆ 57 ವರ್ಷ ವಯಸ್ಸಾಗಿತ್ತು. 

ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದುದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಪ್ರಾಥಮಿಕ ತನಿಖೆಯ ವೇಳೆ ತಿಳಿಸಿದ್ದಾರೆ.  

ಒಂದು ದಶಕದಲ್ಲಿ ಕೊಹ್ಲಿ 20 ಸಾವಿರ ರನ್; ದಿಗ್ಗಜರ ದಾಖಲೆ ಪುಡಿ ಪುಡಿ!

1988ರಿಂದ 1990ರ ವರೆಗೂ ಭಾರತ ಪರ 7 ಏಕದಿನ ಪಂದ್ಯಗಳನ್ನಾಡಿದ್ದ ಅವರು, ತಮಿಳುನಾಡು ಪರ 81 ಪ್ರ.ದರ್ಜೆ ಪಂದ್ಯಗಳಲ್ಲಿ 4999 ರನ್‌ ಗಳಿಸಿದ್ದರು. ದೇಸಿ ಕ್ರಿಕೆಟ್‌ನ ವೀಕ್ಷಕ ವಿವರಣೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು, 2008ರ ಐಪಿಎಲ್‌ ಹರಾಜಿನಲ್ಲಿ ಚೆನ್ನೈ ಸೂಪರ್‌ ಕಿಂಗ್ಸ್‌ ಧೋನಿ, ರೈನಾರನ್ನು ಖರೀದಿಸುವಲ್ಲಿ ಚಂದ್ರಶೇಖರ್‌ ಪಾತ್ರವಿತ್ತು ಎನ್ನುವುದು ವಿಶೇಷ.

ವಿ.ಬಿ.ಚಂದ್ರಶೇಖರ್‌ ನಿಧನಕ್ಕೆ ಅನಿಲ್ ಕುಂಬ್ಳೆ ಸೇರಿದಂತೆ ಟೀಂ ಇಂಡಿಯಾ ಹಿರಿ ಕ್ರಿರಿಯ ಕ್ರಿಕೆಟಿಗರು ಕಂಬನಿ ಮಿಡಿದಿದ್ದಾರೆ. 

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮುಂಬೈಗೆ ಬಂದಿಳಿದ ವಿರುಷ್ಕಾ ದಂಪತಿ; ಮೆಸ್ಸಿಯನ್ನು ಭೇಟಿಯಾಗ್ತಾರಾ ವಿರಾಟ್ ಕೊಹ್ಲಿ?
ಟೀಂ ಇಂಡಿಯಾ ಕ್ರಿಕೆಟಿಗರಿಗೆ ದುಶ್ಚಟವಿದೆ, ಆದರೆ ನನ್ನ ಪತಿಗಿಲ್ಲ! ಈ ಕ್ರಿಕೆಟರ್ ಪತ್ನಿಯಿಂದ ವಿವಾದಾತ್ಮಕ ಹೇಳಿಕೆ