ಶ್ರೀಲಂಕಾ ಸೋಲಿಗೆ ಮಂಡಳಿ ಅಧ್ಯಕ್ಷರೆ ಕಾರಣ: ರಣತುಂಗಾ

Published : Aug 09, 2017, 11:58 PM ISTUpdated : Apr 11, 2018, 12:58 PM IST
ಶ್ರೀಲಂಕಾ ಸೋಲಿಗೆ ಮಂಡಳಿ ಅಧ್ಯಕ್ಷರೆ ಕಾರಣ: ರಣತುಂಗಾ

ಸಾರಾಂಶ

ಮೊದಲು ಅಧಿಕಾರಿಗಳನ್ನು ಸರಿದಾರಿಗೆ ತರಬೇಕು. ಮ್ಯಾಚ್‌ಫಿಕ್ಸಿಂಗ್ ಮಾಡುವವರೊಂದಿಗೆ ಅಧ್ಯಕ್ಷರಿಗೆ ನೇರ ಸಂಪರ್ಕವಿದೆ.

ಕೊಲಂಬೊ(ಆ.9): ಇತ್ತೀಚಿನ ದಿನಗಳಲ್ಲಿ ಶ್ರೀಲಂಕಾ ಕ್ರಿಕೆಟ್ ತಂಡ ಕಳಪೆ ಪ್ರದರ್ಶನ ನೀಡುತ್ತಿದೆ. ಲಂಕಾ ತಂಡದ ಆಟಗಾರರ ಇಂತಹ ಪ್ರದರ್ಶನಕ್ಕೆ ಕ್ರಿಕೆಟ್ ಮಂಡಳಿ ಅಧ್ಯಕ್ಷರೇ ನೇರ ಹೊಣೆ ಎಂದು ಮಾಜಿ ಕ್ರಿಕೆಟಿಗ ಅರ್ಜುನ್ ರಣತುಂಗಾ ಆರೋಪಿಸಿದ್ದಾರೆ. ಈ ಸಂಬಂಧ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಶೀಘ್ರ ತನಿಖೆ ನಡೆಸಬೇಕು ಎಂದು ರಣತುಂಗಾ ಆಗ್ರಹಿಸಿದ್ದಾರೆ.

‘ತಂಡದ ಈ ಕಳಪೆ ಪ್ರದರ್ಶನಕ್ಕೆ ಮಂಡಳಿ ಅಧ್ಯಕ್ಷರಾದ ತಿಲಂಗಾ ಸುಮಥಿಪಾಲಾ ಕಾರಣರಾಗಿದ್ದಾರೆ. ತಂಡದಲ್ಲಿ ಶಿಸ್ತು ಇಲ್ಲವಾಗಿದೆ. ಆದರೆ, ಇದಕ್ಕೆ ಆಟಗಾರರನ್ನು ದೂಷಿಸಿದರೆ ಯಾವುದೇ ಪ್ರಯೋಜನವಿಲ್ಲ. ಕಳ್ಳಾಟ ನಡೆಯುವಾಗ ಏನು ಮಾಡಲು ಸಾಧ್ಯವಿಲ್ಲ. ಮೊದಲು ಅಧಿಕಾರಿಗಳನ್ನು ಸರಿದಾರಿಗೆ ತರಬೇಕು. ಮ್ಯಾಚ್‌ಫಿಕ್ಸಿಂಗ್ ಮಾಡುವವರೊಂದಿಗೆ ಅಧ್ಯಕ್ಷರಿಗೆ ನೇರ ಸಂಪರ್ಕವಿದೆ. ಐಸಿಸಿ ಇದನ್ನು ಗಂಭೀರವಾಗಿ ಪರಿಗಣಿಸಿ. ತನಿಖೆ ನಡೆಸಬೇಕು’ ಎಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ICC Men’s T20 World Cup: ಟಿ20 ವಿಶ್ವಕಪ್‌ಗೆ ಭಾರತ ತಂಡ ಪ್ರಕಟ: ಅಚ್ಚರಿಯ ಆಯ್ಕೆ, ಗಿಲ್‌ಗಿಲ್ಲ ಸ್ಥಾನ
ವರುಣ್ ಗೂಗ್ಲಿಗೆ ಸೌತ್ ಆಫ್ರಿಕಾ ಪಂಚರ್, ಟಿ20 ಸರಣಿ ವಶಪಡಿಸಿಕೊಂಡ ಟೀಂ ಇಂಡಿಯಾ