
ಬೆಂಗಳೂರು(ಜೂ.09): ಈ ವರ್ಷ ದೇಶದಲ್ಲಿ ಅಂಧ ಮಹಿಳೆಯರ ಕ್ರಿಕೆಟ್ ಟೂರ್ನಿಯನ್ನು ಆಯೋಜಿಸಲು ಭಾರತ ಅಂಧರ ಕ್ರಿಕೆಟ್ ಸಂಸ್ಥೆ ಮುಂದಾಗಿದೆ. ಶನಿವಾರ ಇಲ್ಲಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ ಅಂಧರ ಕ್ರಿಕೆಟ್ ಸಂಸ್ಥೆಯ ಮೊದಲ ಪ್ರಶಸ್ತಿ ಪ್ರದಾನ(CABI) ಸಮಾರಂಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ಜಾನ್ ಡೇವಿಡ್ ಹೇಳಿದರು. ಶೀಘ್ರದಲ್ಲೇ ಅಂಧರ ದೇಸಿ ಕ್ರಿಕೆಟ್ ಟೂರ್ನಿಯನ್ನು ನಡೆಸುವುದಾಗಿಯೂ ತಿಳಿಸಿದರು. ಭಾರತ ಅಂಧರ ಕ್ರಿಕೆಟ್ ತಂಡದ ಸಾಧಕರಿಗೆ ಕಾರ್ಯಕ್ರಮದಲ್ಲಿ ಸನ್ಮಾನಿಸಲಾಯಿತು. ಇದೇ ವೇಳೆ ಭಾರತ ಪುರುಷರ ತಂಡ ಜುಲೈ 18ರಿಂದ 28ರ ವರೆಗೂ ಜಮೈಕಾ ಪ್ರವಾಸ ಕೈಗೊಳ್ಳಲಿದೆ ಎನ್ನುವ ಮಾಹಿತಿ ನೀಡಿದರು.
ಸುಂದರ ಸಮಾರಂಭದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಪ್ರತಿಭಾವಂತ ಅಂಧ ಕ್ರಿಕೆಟಿಗರಿಗೆ ಪ್ರಶಸ್ತಿ ವಿತರಿಸಲಾಯಿತು. ಟೀಂ ಇಂಡಿಯಾ ಮಾಜಿ ವಿಕೆಟ್ ಕೀಪರ್, ಕನ್ನಡಿಗ ಸದಾನಂದ್ ವಿಶ್ವನಾಥ್ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಪ್ರಶಸ್ತಿ ವಿತರಿಸಿದರು. CABI ಸಮಾರಂಭದ ರೂವಾರಿ ಭಾರತೀಯ ಅಂಧರ ಕ್ರಿಕೆಟ್ ಸಂಸ್ಥೆ ಅಧ್ಯಕ್ಷ, ಸಮರ್ಥನಂ ಸಂಸ್ಥೆಯ ಸಂಸ್ಥಾಪಕ ಜಿಕೆ ಮಹಾಂತೇಶ್, ಪ್ರಶಸ್ತಿ ಪಡೆದ ಕ್ರಿಕೆಟಿಗರಿಗೆ ಶುಭಹಾರೈಸಿದರು.
B1 ವಿಭಾಗ- ವರ್ಷದ CABI ಕ್ರಿಕೆಟಿಗ ಪ್ರಶಸ್ತಿ ಪಡೆದ ಉತ್ತರ ಪ್ರದೇಶದ ಜೀಶನ್ ಹೈದರ್
B2 ವಿಭಾಗ- ವರ್ಷದ CABI ಕ್ರಿಕೆಟಿಗ ಪ್ರಶಸ್ತಿ ಪಡೆದ ನಾಯಕ ಅಜಯ್ ಕುಮಾರ್ ರೆಡ್ಡಿ
B3 ವಿಬಾಗ- ವರ್ಷದ CABI ಕ್ರಿಕೆಟಿಗ ಪ್ರಶಸ್ತಿ ಪಡೆದ ಕನ್ನಡಿಗ ಸುನಿಲ್ ಕುಮಾರ್
B1 ವಿಭಾಗ- ವರ್ಷದ CABI ಉದಯೋನ್ಮುಖ ಕ್ರಿಕೆಟಿಗ ಪ್ರಶಸ್ತಿ ಪಡೆದ ಕರ್ನಾಟಕದ ವೀರೇಶ್
ದೆಹಲಿಯ ರೋಹಿತ್ B2 ವಿಭಾಗ-ವರ್ಷದ CABI ಉದಯೋನ್ಮುಖ ಕ್ರಿಕೆಟಿಗ ಪ್ರಶಸ್ತಿ ಪಡೆದರೆ , B3 ವಿಬಾಗ- ವರ್ಷದ CABI ಉದಯೋನ್ಮುಖ ಕ್ರಿಕೆಟಿಗ ಪ್ರಶಸ್ತಿಯನ್ನು ಒಡಿಸ್ಸಾದ ಸಿಮರೈ ಮಾಜ್ಹಿ ಪಡೆದಿದ್ದಾರೆ.
2018-19ರ ಸಾಲಿನ CABI ಉದಯೋನ್ಮುಖ ತಂಡ ಪ್ರಶಸ್ತಿಗೆ ಜಾರ್ಖಂಡ್ ಪಾತ್ರವಾಗಿದೆ.
ಕೇರಳಾ ಅಂಧರ ಕ್ರಿಕೆಟ್ ಸಂಸ್ಥೆ ಅತ್ಯುತ್ತಮ ಅಂಧರ ಕ್ರಿಕೆಟ್ ಸಂಸ್ಥೆ ಅನ್ನೋ ಪ್ರಶಸ್ತಿ ಪಡೆದಿದೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.