
ನವದೆಹಲಿ(ಸೆ.28): ಎರಡು ವರ್ಷಗಳ ಬಳಿಕ ಟೀಮ್ ಇಂಡಿಯಾಗೆ ಗೌತಮ್ ಗಂಭೀರ್ ಕಮ್ ಬ್ಯಾಕ್ ಮಾಡಿದ್ದಾರೆ.
ಐತಿಹಾಸಿಕ 500ನೇ ಟೆಸ್ಟ್ ಪಂದ್ಯದ ವೇಳೆ ಗಾಯಗೊಂಡ ಆರಂಭಿಕ ಕೆಎಲ್ ರಾಹುಲ್ ಮುಂದಿನ ಎರಡು ಟೆಸ್ಟ್ಗಳಿಗೂ ಅಲಭ್ಯರಾಗಿದ್ದಾರೆ. ಹೀಗಾಗಿ ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ರಾಹುಲ್ ಬದಲಿಗೆ ಗೌತಮ್ ಗಂಭೀರ್ ಅವರನ್ನು ಆಯ್ಕೆ ಮಾಡಲಾಗಿದೆ.
ಇತ್ತೀಚಿಗೆ ನಡೆದ ದುಲೀಪ್ ಟ್ರೋಫಿ ಟೂರ್ನಿಯಲ್ಲಿ ಗಂಭೀರ್ ಉತ್ತಮ ಪ್ರದರ್ಶನ ನೀಡಿದ್ದರು. ಹೀಗಾಗಿ ಬಿಸಿಸಿಐ ಆಯ್ಕೆದಾರರು ಗಂಭೀರ್ ಅವರನ್ನು ಆಯ್ಕೆ ಮಾಡಿದ್ದಾರೆ.
ಇನ್ನು ಗಂಭೀರ್ ಎರಡು ವರ್ಷಗಳ ಬಳಿಕ ಟೆಸ್ಟ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದಾರೆ. 2014ರಲ್ಲಿ ಇಂಗ್ಲೆಂಡ್ವಿರುದ್ಧ ಕೊನೆಯ ಪಂದ್ಯವಾಡಿದ್ದರು. ಇನ್ನು ವೇಗಿ ಇಶಾಂತ್ ಶರ್ಮಾ ಬದಲಾಗಿ ಆಫ್ ಸ್ಪಿನ್ನರ್ ಜಯಂತ್ ಯಾದವ್ ಗೆ ತಂಡದಲ್ಲಿ ಸ್ಥಾನ ನೀಡಲಾಗಿದೆ ಎಂದು ಬಿಸಿಸಿಐ ಹೇಳಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.