
ದೆಹಲಿ (ಸೆ.16): 2018-19ರ ವಿಜಯ್ ಹಜಾರೆ ಟ್ರೋಫಿಗೆ ದೆಹಲಿ ತಂಡ ಪ್ರಕಟವಾಗಿದೆ. ಮೊದಲ 3 ಪಂದ್ಯಗಳಿಗೆ ದೆಹಲಿ ತಂಡದ ನಾಯಕರಾಗಿ ಹಿರಿಯ ಆಟಗಾರ ಗೌತಮ್ ಗಂಭೀರ್ ಆಯ್ಕೆಯಾಗಿದ್ದಾರೆ.
2016-17ರ ಟೂರ್ನಿಗೆ ಗಂಭೀರ್ ಅವರನ್ನು ನಾಯ ಕತ್ವದಿಂದ ಕೆಳಗಿಳಿಸಲಾಗಿತ್ತು. ಕಳೆದ ಋತುವಿನಲ್ಲಿ ಗಂಭೀರ್, ತಾವೇ ನಾಯಕತ್ವದಿಂದ ಹಿಂದೆ ಸರಿದಿದ್ದರು. ಗಂಭೀರ್ ಟೀವಿ ವಾಹಿನಿಗಳಲ್ಲಿ
ಕ್ರಿಕೆಟ್ ತಜ್ಞರಾಗಿ ಪಾಲ್ಗೊಳ್ಳಲು ಆರಂಭಿಸಿದ್ದಾರೆ.
ಇದನ್ನು ಓದಿ: ಹಣೆಗೆ ಕುಂಕುಮ, ತಲೆಗೆ ದುಪ್ಪಟ್ಟ- ಗಂಭೀರ್ ಹೊಸ ಅವತಾರ!
ಜತೆಗೆ ದೆಹಲಿ ಕ್ರಿಕೆಟ್ ಸಂಸ್ಥೆಯಲ್ಲಿ ಅವರಿಗೆ ಜವಾಬ್ದಾರಿ ಸಹ ನೀಡಲಾಗುತ್ತಿದೆ ಎನ್ನುವ ಸುದ್ದಿ ಇದೆ. ಹೀಗಿರುವಾಗ ಅವರನ್ನು ತಂಡದ ನಾಯಕರನ್ನಾಗಿ ಮಾಡಿರುವುದು ಸ್ವಹಿತಾಸಕ್ತಿ ಆರೋಪಕ್ಕೆ
ದಾರಿ ಮಾಡಿಕೊಟ್ಟಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.