ಬಿಸಿಸಿಐ ವಿಶೇಷ ಸಮಿತಿಯಲ್ಲಿ ಸ್ಥಾನಪಡೆದ ದಾದಾ

Published : Jun 28, 2017, 05:08 PM ISTUpdated : Apr 11, 2018, 01:08 PM IST
ಬಿಸಿಸಿಐ ವಿಶೇಷ ಸಮಿತಿಯಲ್ಲಿ ಸ್ಥಾನಪಡೆದ ದಾದಾ

ಸಾರಾಂಶ

ಆದಷ್ಟು ಬೇಗ ಲೋಧಾ ಸಮಿತಿಯ ಯಾವೆಲ್ಲಾ ಶಿಫಾರಸುಗಳನ್ನು ಜಾರಿಗೆ ತರಬಹುದು ಎನ್ನುವುದನ್ನು ಅಧ್ಯಯನ ಮಾಡಿ, ಅದಕ್ಕೆ ಸಂಬಂಧಿಸಿದ ಪಟ್ಟಿಯನ್ನು ಜುಲೈ 10ರೊಳಗೆ ಬಿಸಿಸಿಐಗೆ ತಲುಪಿಸುವುದು ವಿಶೇಷ ಸಮಿತಿಯ ಗುರಿಯಾಗಿದೆ.

ನವದೆಹಲಿ(ಜೂ.28): ನ್ಯಾ. ಲೋಧಾ ಸಮಿತಿ ಶಿಫಾರಸುಗಳನ್ನು ಅನುಷ್ಠಾನಕ್ಕೆ ತರಲು ಬಿಸಿಸಿಐ ರಚಿಸಿರುವ ವಿಶೇಷ ಸಮಿತಿಯಲ್ಲಿ ಭಾರತ ತಂಡದ ಮಾಜಿ ನಾಯಕ ಸೌರವ್‌ ಗಂಗೂಲಿ ಸ್ಥಾನ ಪಡೆದಿದ್ದಾರೆ. ಮಂಗಳವಾರ ರಚನೆಯಾದ 7 ಸದಸ್ಯರ ಸಮಿತಿಯನ್ನು ಬಿಸಿಸಿಐ ಹಿರಿಯ ಅಧಿಕಾರಿ ರಾಜೀವ್‌ ಶುಕ್ಲಾ ಮುನ್ನಡೆಸಲಿದ್ದಾರೆ.
ಕೆಲ ರಾಜ್ಯ ಸಂಸ್ಥೆಗಳು ಲೋಧಾ ಸಮಿತಿ ಶಿಫಾರಸುಗಳ ಅನುಷ್ಠಾನಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದು, ಇದಕ್ಕೆ ಪರಿಹಾರ ಹುಡುಕುವ ನಿಟ್ಟಿನಲ್ಲಿ ಈ ಸಮಿತಿ ಕಾರ್ಯ ನಿರ್ವಹಿಸಲಿದೆ ಎಂದು ಬಿಸಿಸಿಐ ಪ್ರಕಟಣೆ ತಿಳಿಸಿದೆ.

ಕೇರಳ ಕ್ರಿಕೆಟ್‌ ಸಂಸ್ಥೆಯ ಮಾಜಿ ಅಧ್ಯಕ್ಷ ಟಿ.ಸಿ.ಮ್ಯಾಥ್ಯೂ, ಮೆಘಾಲಯ ಕ್ರಿಕೆಟ್‌ ಸಂಸ್ಥೆ ಕಾರ್ಯದರ್ಶಿ ನಬ ಭಟ್ಟಾಚಾರ್ಜಿ, ಗುಜರಾತ್‌ ಕ್ರಿಕೆಟ್‌ ಸಂಸ್ಥೆ ಕಾರ್ಯದರ್ಶಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್‌ ಷಾ ಅವರ ಪುತ್ರ ಜಯ್‌ ಷಾ, ಬಿಸಿಸಿಐ ಖಜಾಂಚಿ ಅನಿರುದ್ಧ ಚೌಧರಿ ಹಾಗೂ ಬಿಸಿಸಿಐ ಹಂಗಾಮಿ ಕಾರ್ಯದರ್ಶಿ ಅಮಿತಾಭ್‌ ಚೌಧರಿ ಸಮಿತಿಯಲ್ಲಿರುವ ಇತರೆ ಸದಸ್ಯರಾಗಿದ್ದಾರೆ.

ಆದಷ್ಟು ಬೇಗ ಲೋಧಾ ಸಮಿತಿಯ ಯಾವೆಲ್ಲಾ ಶಿಫಾರಸುಗಳನ್ನು ಜಾರಿಗೆ ತರಬಹುದು ಎನ್ನುವುದನ್ನು ಅಧ್ಯಯನ ಮಾಡಿ, ಅದಕ್ಕೆ ಸಂಬಂಧಿಸಿದ ಪಟ್ಟಿಯನ್ನು ಜುಲೈ 10ರೊಳಗೆ ಬಿಸಿಸಿಐಗೆ ತಲುಪಿಸುವುದು ವಿಶೇಷ ಸಮಿತಿಯ ಗುರಿಯಾಗಿದೆ.

 

ಜುಲೈ 14ರಂದು ಲೋಧಾ ಸಮಿತಿ ಶಿಫಾರಸು ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯಲಿದ್ದು, ಈ ವೇಳೆ ಕ್ರಿಕೆಟ್‌ ಮಂಡಳಿ ತಾನು ಕೈಗೊಂಡಿರುವ ತೀರ್ಮಾನವನ್ನು ಪ್ರಕಟಿಸಲಿದೆ ಎಂದು ಬಿಸಿಸಿಐ ಮೂಲಗಳು ತಿಳಿಸಿವೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಜಯ್‌ ಹಜಾರೆ ಟ್ರೋಫಿ ದಾಖಲೆ, ಜಾರ್ಖಂಡ್‌ ವಿರುದ್ಧ 413 ರನ್‌ ಬೆನ್ನಟ್ಟಿ ಗೆದ್ದ ಕರ್ನಾಟಕ!
ವಿಜಯ್ ಹಜಾರೆ ಟ್ರೋಫಿ ಕಮ್‌ಬ್ಯಾಕ್‌ ಪಂದ್ಯದಲ್ಲಿ ಶತಕ ಚಚ್ಚಿದ ಕಿಂಗ್ ಕೊಹ್ಲಿ! ವಿರಾಟ್‌ಗಿದು ಕಳೆದ 4 ಪಂದ್ಯಗಳಲ್ಲಿ 3ನೇ ಶತಕ