
ಮುಂಬೈ(ಆ.15): ಲೋಧ ಸಮಿತಿ ಶಿಫಾರಸು ಇದೀಗ ಹಲವು ಮಾಜಿ ಕ್ರಿಕೆಟಿಗರಿಗೆ ಸಂಕಷ್ಟ ತಂದೊಡ್ಡಿದೆ. ಇತ್ತೀಚೆಗೆ ಟೀಂ ಇಂಡಿಯಾ ಅಂಡರ್-19 ತಂಡದ ಕೋಚ್ ರಾಹುಲ್ ದ್ರಾವಿಡ್ ಲೋಧ ಸಮಿತಿ ಶಿಫಾರಸಿನಿಂದ ರಾಜಸ್ಥಾನ ರಾಯಲ್ಸ್ ತಂಡ ಮೆಂಟರ್ ಜವಾಬ್ದಾರಿಗೆ ರಾಜಿನಾಮೆ ನೀಡಿದ್ದರು. ಈ ಮೂಲಕ ಸ್ವಹಿತಾಸಕ್ತಿ ಸಂಘರ್ಷದಿಂದ ಪಾರಾಗಿದ್ದರು.
ರಾಹುಲ್ ದ್ರಾವಿಡ್ ಬಳಿಕ ಇದೀಗ ಸ್ವಹಿತಾಸಕ್ತಿ ಸಂಘರ್ಷಕ್ಕೆ ಟೀಂ ಇಂಡಿಯಾ ದಿಗ್ಗಜ ಕ್ರಿಕೆಟಿಗರು, ಬಿಸಿಸಿಐ ಸಲಹಾ ಸಮಿತಿಯ ಸಚಿನ್ ತೆಂಡೂಲ್ಕರ್, ವಿವಿಎಸ್ ಲಕ್ಷ್ಮಣ್ ಹಾಗೂ ಸೌರವ್ ಗಂಗೂಲಿಯನ್ನ ಸುತ್ತಿಕೊಂಡಿದೆ.
ಸೌರವ್ ಗಂಗೂಲಿ ಬಂಗಳಾ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇನ್ನು ವಿವಿಎಸ್ ಲಕ್ಷ್ಮಣ್, ಸನ್ ರೈಸರ್ಸ್ ಹೈದರಾಬಾದ್ ತಂಡದ ಮೆಂಟರ್ ಆಗಿದ್ದಾರೆ. ಸಮಿತಿ ಮುಖ್ಯಸ್ಥ ಸಚಿನ್ ತೆಂಡೂಲ್ಕರ್ ಪುತ್ರ, ಅರ್ಜುನ್ ತೆಂಡೂಲ್ಕರ್ ಅಂಡರ್ 19 ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಹೀಗಾಗಿ ಸಲಹಾ ಸಮಿತಿಯ ಮೂವರು ಸದಸ್ಯರು ಕೂಡ ಸ್ವಹಿತಾಸಕ್ತಿ ಸಂಘರ್ಷದಲ್ಲಿದ್ದಾರೆ.
ಸ್ವಹಿತಾಸಕ್ತಿ ಸಂಘರ್ಷದಿಂದ ಪಾರಾಗಲು ಯಾವುದಾರೊಂದು ಹುದ್ದೆ ತ್ಯಜಿಸಬೇಕಾದ ಅನಿವಾರ್ಯತೆ ಇದೀಗ ಸಲಹಾ ಸಮಿತಿ ಸದಸ್ಯರಿಗೆ ಎದುರಾಗಿದೆ. ಹೀಗಾಗಿ ಶೀಘ್ರದಲ್ಲೇ ಸಚಿನ್, ಗಂಗೂಲಿ ಹಾಗೂ ಲಕ್ಷ್ಮಣ್ ಸಲಹಾ ಸಮಿತಿಗೆ ರಾಜಿನಾಮೆ ನೀಡೋ ಸಾಧ್ಯತೆ ಹೆಚ್ಚಿದೆ.
ಇಷ್ಟು ದಿನ ಬಿಸಿಸಿಐ ಸಲಹಾ ಸಮಿತಿ ಸದಸ್ಯರು ಗೌರವ ಹುದ್ದೆ ನಿರ್ವಹಿಸುತ್ತಿದ್ದರು. ಇನ್ಮುಂದೆ ಸಲಹಾ ಸಮಿತಿಗೂ ವೇತನ ನೀಡಲು ಬಿಸಿಸಿಐ ನಿರ್ಧರಿಸಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.