
ಮುಂಬೈ(ಜ.09): 2017-18ರ ರಣಜಿ ಟ್ರೋಫಿಯಲ್ಲಿ ಸಂಭಾವನೆ ಇಲ್ಲದೇ ಆಡಿದ್ದಾಗಿ ವಿದರ್ಭ ತಂಡದ ಅನುಭವಿ ಬ್ಯಾಟ್ಸ್'ಮನ್ ವಾಸೀಂ ಜಾಫರ್ ಸ್ಪಷ್ಟಪಡಿಸಿದ್ದಾರೆ.
ತಂಡ ಚೊಚ್ಚಲ ಬಾರಿಗೆ ಚಾಂಪಿಯನ್ ಆಗುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಜಾಫರ್, 2016-17ರಲ್ಲಿ ವಿದರ್ಭದೊಂದಿಗೆ ಗುತ್ತಿಗೆಗೆ ಸಹಿ ಹಾಕಿದ್ದರು. ಆದರೆ ಗಾಯದ ಸಮಸ್ಯೆಯಿಂದ ಅವರು ರಣಜಿ ಟ್ರೋಫಿಯಲ್ಲಿ ಆಡಲು ಸಾಧ್ಯವಾಗಿರಲಿಲ್ಲ. ಬಳಿಕ ಸೀಮಿತ ಓವರ್ ಟೂರ್ನಿಯಲ್ಲಿ ಜಾಫರ್'ಗೆ ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೂ ವಿದರ್ಭ ಕ್ರಿಕೆಟ್ ಸಂಸ್ಥೆ ಜಾಫರ್ಗೆ ಸಂಭಾವನೆ ಪಾವತಿಸಿತ್ತು.
ಸಂಸ್ಥೆಯ ಋಣ ತೀರಿಸುವ ದೃಷ್ಟಿಯಿಂದ ಈ ಸಾಲಿನಲ್ಲಿ ಸಂಭಾವನೆ ಇಲ್ಲದೆ ಆಡಲು ತಾವು ನಿರ್ಧರಿಸಿದ್ದಾಗಿ ಜಾಫರ್ ಹೇಳಿದ್ದಾರೆ. 2017-18ನೇ ಸಾಲಿನ ರಣಜಿ ಟ್ರೋಫಿಯಲ್ಲಿ ಜಾಫರ್ ವಿದರ್ಭ ಪರ 500ಕ್ಕೂ ಹೆಚ್ಚು ರನ್ ಬಾರಿಸಿದ್ದರು.
ಜಾಫರ್ ಅವರ ನಿರ್ಧಾರವನ್ನು ಡೆಲ್ಲಿ ಕ್ರಿಕೆಟಿಗ ಗೌತಮ್ ಗಂಭೀರ್ ಕೊಂಡಾಡಿದ್ದಾರೆ.
ವಿದರ್ಭ ತಂಡ ಡೆಲ್ಲಿ ವಿರುದ್ಧ ಜಯಭೇರಿ ಬಾರಿಸುವ ಮೂಲಕ ಚೊಚ್ಚಲ ಬಾರಿಗೆ ರಣಜಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.