
ನವದೆಹಲಿ(ಅ.28): ಚಲನಚಿತ್ರ ಪ್ರಾರಂಭಕ್ಕೂ ಮುನ್ನಾ ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ನುಡಿಸುವುದಕ್ಕೆ ಕ್ರಿಕೆಟಿಗ ಗೌತಮ್ ಗಂಭೀರ್ ಬೆಂಬಲ ವ್ಯಕ್ತಪಡಿಸಿದ್ದಾರೆ.
ಚಿತ್ರಮಂದಿರಗಳಲ್ಲಿ ರಾಷ್ಟ್ರಗೀತೆ ನುಡಿಸುವ ಕುರಿತು ಪರ, ವಿರೋಧ ಚರ್ಚೆ ನಡೆಯುತ್ತಿರುವ ಸಂದರ್ಭದಲ್ಲಿ ಟೀಂ ಇಂಡಿಯಾದ ಆರಂಭಿಕ ದಾಂಡಿಗ ಇದಕ್ಕೆ ಬೆಂಬಲ ಸೂಚಿಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ಗೌತಿ, ‘ಕ್ಲಬ್'ಗಳ ಹೊರಗೆ 20 ನಿಮಿಷ ಕಾಯುವಿರಿ, ರೆಸ್ಟೋರೆಂಟ್'ಗಳ ಹೊರಭಾಗದಲ್ಲಿ 30 ನಿಮಿಷ ಕಾಯುವಿರಿ. ಹೀಗಿರುವಾಗ ರಾಷ್ಟ್ರಗೀತೆಗೆ ಗೌರವ ಸಲ್ಲಿಸಲು 52 ಸೆಕೆಂಡ್'ಗಳ ಕಾಲ ಎದ್ದು ನಿಲ್ಲುವುದು ನಿಮಗೆ ಕಷ್ಟವೇ?’ ಎಂದು ಪ್ರಶ್ನಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.