
ನವದೆಹಲಿ(ಸೆ.14): ಟೀಂ ಇಂಡಿಯಾ ಕ್ರಿಕೆಟಿಗ ಗೌತಮ್ ಗಂಭೀರ್ ಸದ್ಯ ಅಂತಾರಾಷ್ಟ್ರೀಯ ಕ್ರಿಕೆಟ್ನಿಂದ ದೂರ ಉಳಿದರೂ ಪ್ರತಿ ದಿನ ಸುದ್ದಿಯಲ್ಲಿದ್ದಾರೆ. ಟೀಂ ಇಂಡಿಯಾದ ಡ್ಯಾಶಿಂಗ್ ಓಪನರ್ ಗಂಭೀರ್ ಹೊಸ ಅವತಾರದಲ್ಲಿ ಕಾಣಿಸಿಕೊಳ್ಳೋ ಮೂಲಕ ಭರ್ಜರಿ ಸದ್ದು ಮಾಡಿದ್ದಾರೆ.
ತಲೆ ಮೇಲೆ ದುಪ್ಪಟ್ಟ, ಹಣೆಗೆ ಕುಂಕುಮ ಹಾಕಿ ಹೆಣ್ಣಿನ ವೇಷಭೂಷಣದಲ್ಲಿ ಗಂಭೀರ್ ಕಾಣಿಸಿಕೊಂಡಿದ್ದಾರೆ. ಅಷ್ಟಕ್ಕೂ ಗಂಭೀರ್ ಈ ಅವತಾರದಲ್ಲಿ ಕಾಣಿಸಿಕೊಂಡಿದ್ದು, ದೆಹಲಿಯಲ್ಲಿ ನಡೆದ ಹಿಜಿರಾ ಹಬ್ಬದಲ್ಲಿ .
ಶೆಮಾರಿ ಸಮಾಜ ಆಯೋಜಿಸಿದ ತೃತೀಯಲಿಂಗಿಗಳ ಹಿಜಿರಾ ಹಬ್ಬದ ಉದ್ಘಾಟನೆ ಮಾಡಿದ ಗೌತಮ್ ಗಂಭೀರ್ ಹೊಸ ವೇಷಭೂಷಣದಲ್ಲಿ ಕಾಣಿಸಿಕೊಂಡರು. ಈ ಮೂಲಕ ತೃತೀಯಲಿಂಗಗಳಿಗೆ ಗಂಭೀರ್ ಬೆಂಬಲ ಸೂಚಿಸಿದರು.
ಗಂಭೀರ್ ಹೊಸ ಅವತಾರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ರಕ್ಷಾ ಬಂಧನ ದಿನ, ತೃತೀಯ ಲಿಂಗಗಳಿಂದ ರಕ್ಷಾ ಬಂಧನ ಕಟ್ಟಿಸಿಕೊಂಡು ಸುದ್ದಿಯಾಗಿದ್ದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.