ಗಂಭೀರ್'ಗೆ ಕೊಕ್; ಭುವಿ ವಾಪಸ್

Published : Nov 22, 2016, 04:06 PM ISTUpdated : Apr 11, 2018, 01:04 PM IST
ಗಂಭೀರ್'ಗೆ ಕೊಕ್; ಭುವಿ ವಾಪಸ್

ಸಾರಾಂಶ

ಇದೊಂದು ಬದಲಾವಣೆಯನ್ನು ಹೊರತುಪಡಿಸಿದರೆ, ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದವರನ್ನೇ ಉಳಿಸಿಕೊಳ್ಳಲಾಗಿದೆ.

ನವದೆಹಲಿ(ನ.22): ಪ್ರಸಕ್ತ ನಡೆಯುತ್ತಿರುವ ಇಂಗ್ಲೆಂಡ್ ವಿರುದ್ಧದ ಇನ್ನುಳಿದ ಮೂರು ಟೆಸ್ಟ್ ಪಂದ್ಯಗಳಿಗೆ ಆರಂಭಿಕ ಗೌತಮ್ ಗಂಭೀರ್ ಅವರನ್ನು ಕೈಬಿಟ್ಟಿರುವ ಭಾರತೀಯ ಕ್ರಿಕೆಟ್ ಆಯ್ಕೆ ಸಮಿತಿ ವೇಗಿ ಭುವನೇಶ್ವರ್ ಕುಮಾರ್‌'ಗೆ ತಂಡದ ಹದಿನಾರನೇ ಆಟಗಾರನಾಗಿ ಕರೆಕೊಟ್ಟಿದೆ.

ಇದೊಂದು ಬದಲಾವಣೆಯನ್ನು ಹೊರತುಪಡಿಸಿದರೆ, ಮೊದಲೆರಡು ಟೆಸ್ಟ್ ಪಂದ್ಯಗಳಿಗೆ ಆಯ್ಕೆಯಾಗಿದ್ದವರನ್ನೇ ಉಳಿಸಿಕೊಳ್ಳಲಾಗಿದೆ. ವಿಶಾಖಪಟ್ಟಣದಲ್ಲಿ ಸೋಮವಾರವಷ್ಟೇ ಮುಕ್ತಾಯ ಕಂಡ ಎರಡನೇ ಟೆಸ್ಟ್ ಪಂದ್ಯದಲ್ಲಿ 246 ರನ್ ಗಳಿಸಿರುವ ವಿರಾಟ್ ಕೊಹ್ಲಿ ಸಾರಥ್ಯದ ಭಾರತ ತಂಡ ಐದು ಟೆಸ್ಟ್ ಪಂದ್ಯ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ. ಶನಿವಾರ (ನ.26)ದಿಂದ ಮೂರನೇ ಟೆಸ್ಟ್ ಶುರುವಾಗಲಿದೆ.

 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅಂಡರ್ 19 ಏಷ್ಯಾಕಪ್ ಫೈನಲ್: ಪಾಕ್ ಎದುರು ಮುಗ್ಗರಿಸಿದ ಭಾರತ; ವೈಭವ್ ಸೂರ್ಯವಂಶಿ ಕನಸು ನುಚ್ಚುನೂರು!
2026ರ ಟಿ20 ವಿಶ್ವಕಪ್‌ಗೆ ಭಾರತ ತಂಡದಲ್ಲಿ ಒಂದಲ್ಲ ಎರಡಲ್ಲ ಬರೋಬ್ಬರಿ 7 ಬದಲಾವಣೆ!