
ನವದೆಹಲಿ(ಮೇ.23): ಮುಂದಿನ ತಿಂಗಳು ಇಂಗ್ಲೆಂಡ್'ನಲ್ಲಿ ನಡೆಯಲಿರುವ ಐಸಿಸಿ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಗೌತಮ್ ಗಂಭೀರ್, ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳುತ್ತಿರುವ ತನ್ನ ಸಹಪಾಠಿ ಶಿಖರ್ ಧವನ್'ಗೆ ಶುಭಕೋರಿದ್ದಾರೆ.
ಐಪಿಎಲ್'ನಲ್ಲಿ ಅದ್ಭುತ ಪ್ರದರ್ಶನ ಫ್ಯಾಬ್ ಸ್ಟೈಲೀಶ್ ಅವಾರ್ಡ್ ಪ್ರಶಸ್ತಿ ಗೆದ್ದುಕೊಂಡ ಕೆಕೆಆರ್ ನಾಯಕ ಗೌತಮ್ ಗಂಭೀರ್ ಅವರಿಗೆ ಮೊದಲು ಶಿಖರ್ ಧವನ್ ಅಭಿನಂದನೆ ಸಲ್ಲಿಸಿದ್ದರು. ಇದಕ್ಕೆ ಪ್ರತಿಯಾಗಿ ಗಂಭೀರ್ ಚಾಂಪಿಯನ್ಸ್ ಟ್ರೋಫಿಗೆ ತಂಡದಲ್ಲಿ ಸ್ಥಾನ ಪಡೆದ ಶಿಖರ್ ಧವನ್'ಗೆ ಶುಭ ಕೋರಿದ್ದಾರೆ.
10ನೇ ಐಪಿಎಲ್ ಆವೃತ್ತಿಯಲ್ಲಿ ಎರಡನೇ ಗರಿಷ್ಟ ರನ್ ದಾಖಲಿಸಿದರೂ ಗೌತಮ್ ಗಂಭೀರ್ ಚಾಂಪಿಯನ್ಸ್ ಟ್ರೋಫಿಯಲ್ಲಿ ಸ್ಥಾನಪಡೆಯಲು ವಿಫಲರಾಗಿದ್ದಾರೆ.
ಹೀಗಿತ್ತು ಧವನ್-ಗಂಭೀರ್ ನಡೆಸಿದ ಟ್ವೀಟ್'ಗಳು...
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.