
ಕರಾಚಿ(ಜೂ.17): ಚಾಂಪಿಯನ್ಸ್ ಟ್ರೋಫಿಯ ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ ಹೀನಾಯ ಸೋಲುಂಡಿದ್ದ ಪಾಕಿಸ್ತಾನಕ್ಕೆ ಈಗ ಸೇಡು ತೀರಿಸಿಕೊಳ್ಳಲು ಸುವರ್ಣಾವಕಾಶ ಬಂದೊದಗಿದೆ ಎಂದು ಪಾಕಿಸ್ತಾನದ ಕ್ರಿಕೆಟ್ ತಂಡದ ಮಾಜಿ ನಾಯಕ ಇಮ್ರಾನ್ಖಾನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಮೊದಲ ಪಂದ್ಯದಲ್ಲಿ ಭಾರತ ವಿರುದ್ಧ 124ರನ್'ಗಳ ಹೀನಾಯ ಸೋಲು ಕಾಣುವ ಮೂಲಕ ಪಾಕ್ ಭಾರೀ ಮುಖಭಂಗಕ್ಕೆ ಗುರಿಯಾಗಿತ್ತು.
ಇದೀಗ ತನ್ನ ಮರ್ಯಾದೆಯನ್ನು ಮರು ಸಂಪಾದಿಸಲು ಪಾಕ್'ಗೆ ಇದು ಒಳ್ಳೆಯ ಅವಕಾಶವಾಗಿದೆ ಎಂದು ಪಾಕ್'ನ ಸಮ್ಮಾ ವಾಹಿನಿಯೊಂದಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ.
ಟೂರ್ನಿಯ ಮೊದಲ ಪಂದ್ಯದಲ್ಲಿ ಭಾರತ ಎದುರು ಪಾಕಿಸ್ತಾನ ನಿಜಕ್ಕೂ ಶೋಚನೀಯ ಸೋಲು ಕಂಡಿತ್ತು. ಈ ಪಂದ್ಯದಲ್ಲಿ ಪಾಕ್ ಆಟಗಾರರು ಸಾಕಷ್ಟು ಎಡವಟ್ಟುಗಳನ್ನು ಮಾಡಿದ್ದರು. ಆದರೆ ಫೈನಲ್'ನಲ್ಲಿ ನಮ್ಮ ಆಟಗಾರರು ತಪ್ಪುಗಳನ್ನು ಮರುಕಳಿಸದಂತೆ ಎಚ್ಚರವಹಿಸಲಿದ್ದಾರೆ ಎಂದು ಇಮ್ರಾನ್ ಖಾನ್ ಹೇಳಿದರು.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.