
ವಿಜಯಪುರ[ಜೂ.26]: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿ ಪರಶುರಾಮ್ ವಾಗ್ಮೊರೆ ಒಬ್ಬ ಅಪ್ರತಿಮ ಕ್ರಿಕೆಟ್ ಆಟಗಾರನಾಗಿದ್ದ ಮಾಹಿತಿ ಇದೀಗ ಬೆಳಕಿಗೆ ಬಂದಿದೆ.
ಹೌದು ಗೌರಿ ಹತ್ಯೆ ಪ್ರಕರಣದಲ್ಲಿ ಬಂಧಿತನಾಗಿ ಎಸ್’ಐಟಿಯ ತನಿಖೆ ಎದುರಿಸುತ್ತಿರುವ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ವಾಗ್ಮೊರೆ ಕ್ರಿಕೆಟ್’ನಲ್ಲಿ ಆಲ್ರೌಂಡರ್ ಆಗಿ ಗುರುತಿಸಿಕೊಂಡಿದ್ದ ಜತೆಗೆ ವಿರಾಟ್ ಕೊಹ್ಲಿ ಎಂದೇ ಖ್ಯಾತಿ ಗಳಿಸಿದ್ದ ಎನ್ನಲಾಗಿದೆ.
ಪರಶುರಾಮ್ ವೇಗದ ಬೌಲಿಂಗ್ ಹಾಗೂ ಆಕ್ರಮಣಕಾರಿ ಬ್ಯಾಟ್ಸ್’ಮನ್ ಆಗಿ ಗುರುತಿಸಿಕೊಂಡಿದ್ದ. ಸಿಂದಗಿ ಐಪಿಎಲ್ ಟೂರ್ನಿಯಲ್ಲಿ ಟೀಂ ಸಿಂದಗಿ ವಾರಿಯರ್ಸ್ ತಂಡವನ್ನು ಮುನ್ನಡೆಸಿದ್ದ ವಾಗ್ಮೊರೆ ತಮ್ಮ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ್ದ. ಕೊಹ್ಲಿ ಶೈಲಿಯಲ್ಲಿಯೇ ಬ್ಯಾಟ್ ಬೀಸುತ್ತಿದ್ದ ವಾಗ್ಮೊರೆ ಫೀಲ್ಡಿಗೆ ಇಳಿದರೆ ಪ್ರೇಕ್ಷಕರು ಆತನನ್ನು ಕೊಹ್ಲಿ ಎಂದೇ ಸಂಬೋದಿಸುತ್ತಿದ್ದರು.
2017ರ ಸೆಪ್ಟೆಂಬರ್ 05ರಂದು ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಅವರ ನಿವಾಸದೆದುರೇ ಶೂಟ್ ಮಾಡಿ ಹತ್ಯೆ ಮಾಡಲಾಗಿತ್ತು. ಇದೀಗ ಎಸ್‘ಐಟಿ ಐವರು ಶಂಕಿತರನ್ನು ಬಂಧಿಸಿದ್ದು, ಪರಶುರಾಮ್ ವಾಗ್ಮೊರೆ ಎಂಬಾತನೆ ಹತ್ಯೆ ಮಾಡಿದ್ದಾನೆ ಎಂದು ಪೊಲೀಸ್ ಉನ್ನತ ಮೂಲಗಳು ಖಚಿತ ಪಡಿಸಿವೆ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.