
ಮುಂಬೈ[ಮೇ.29]: ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಗೆಲ್ಲಿಸಿದರೆ,ಕೊಹ್ಲಿಯನ್ನು ಮುಖ್ಯ ಅತಿಥಿಯಾಗಿ ಕರೆಸುವುದಾಗಿ ಹೇಳಿ ನಕಲಿ ಕೊಹ್ಲಿಯನ್ನು ಕರೆಸಿದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಸ್ಥಳೀಯ ರಾಜಕಾರಣಿ ವಿಠ್ಠಲ್ ಗಣಪತ್ ಎನ್ನುವವರು ಚುನಾವಣೆಯಲ್ಲಿ ತಮ್ಮ ಪರ ಮತ ಹಾಕಿ ಗೆಲ್ಲಿಸಿದರೆ ಕೊಹ್ಲಿಯನ್ನು ಕರೆಸುವುದಾಗಿ ಭಾರತೀಯ ನಾಯಕನ ಚಿತ್ರವುಳ್ಳ ಪೋಸ್ಟರ್ಗಳನ್ನು ಹಾಕಿಸಿದ್ದರು. ಬಳಿಕ ಕೊಹ್ಲಿಯನ್ನು ಹೋಲುವ ವ್ಯಕ್ತಿಯನ್ನು ಕರೆಸಿ ಊರಿನವರಿಗೆ ತೋರಿಸಿ ನಗೆಪಾಟಲಿಗೆ ಕಾರಣರಾಗಿದ್ದಾರೆ.
ಚುನಾವಣೆ ಪೋಸ್ಟರ್, ನಕಲಿ ಕೊಹ್ಲಿ ಫೋಟೋಗಳು ಸಾಮಾಜಿಕ ತಾಣದಲ್ಲಿ ವೈರಲ್ ಆಗಿವೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.