
ಕೊಲಂಬೊ(ಜು.13): ಹಂಬನ್'ಟೋಟಾ ಕ್ರೀಡಾಂಗಣದಲ್ಲಿ ಕಾರ್ಯನಿರ್ವಹಿಸುತ್ತಿದ್ದ 12 ಮಂದಿ ಅರೆಕಾಲಿಕ ಸಿಬ್ಬಂದಿಗಳಿಗೆ ನೀಡಿದ್ದ ಸಮವಸ್ತ್ರವನ್ನು ಕಿತ್ತುಕೊಂಡು ಅರೆನಗ್ನಾವಸ್ಥೆಯಲ್ಲೇ ಅವರನ್ನು ಮೈದಾನದಿಂದ ಹೊರಹಾಕಿದ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಸೋಮವಾರ ಜಿಂಬಾಬ್ವೆ ವಿರುದ್ಧದ ಕೊನೆಯ ಏಕದಿನ ಪಂದ್ಯದಲ್ಲಿ ಶ್ರೀಲಂಕಾ ಸೋಲು ಕಾಣುವ ಮೂಲಕ ಸರಣಿಯನ್ನು ಕೈಚೆಲ್ಲಿತ್ತು. ಹೀಗಾಗಿ ಮೈದಾನದ ಸಿಬ್ಬಂದಿಗಳನ್ನು ಅಮಾನವೀಯವಾಗಿ ನಡೆಸಿಕೊಂಡಿತ್ತು. ಆ ದಿನ ರಾತ್ರಿ ಸಿಬ್ಬಂದಿಗಳನ್ನು ಅರೆಬೆತ್ತಲೆಯಾಗಿಯೇ ಮೈದಾನದಿಂದ ಹೊರದಬ್ಬಿತ್ತು.
ಈ ಸುದ್ದಿ ಬೆಳಕಿಗೆ ಬರುತ್ತಿದ್ದಂತೆ ಶ್ರೀಲಂಕಾ ಕ್ರಿಕೆಟ್ ಮಂಡಳಿ ಅಧ್ಯಕ್ಷ ತಿಲಂಗ ಸಮತಿಪಾಲ ಸಿಬ್ಬಂದಿಗಳ ಕ್ಷಮೆ ಕೋರಿದ್ದಾರೆ. ಅಲ್ಲದೇ ಸಿಬ್ಬಂದಿಗಳಿಗೆ ಉಚಿತವಾಗಿ ಸಮವಸ್ತ್ರ ಹಾಗೂ ಹೆಚ್ಚುವರಿ ದಿನಗಳ ಹಣವನ್ನು ನೀಡಿದ್ದಾರೆಂದು ವರದಿಯಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.