
ಚಂಡೀಗಢ(ಆ.24): ಡೇರಾ ಸಚ್ಚಾ ಸೌದಾ ಪಂಗಡದ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ವಿರುದ್ಧದ ಅತ್ಯಾಚಾರ ಪ್ರಕರಣದ ತೀರ್ಪು ಶುಕ್ರವಾರ ಹೊರಬೀಳಲಿರುವ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶ ಚಂಡೀಗಢದಲ್ಲಿರುವ ಕ್ರಿಕೆಟ್ ಮೈದಾನವನ್ನೇ ಒಂದು ದಿನದ ಮಟ್ಟಿಗೆ ತಾತ್ಕಾಲಿಕ ಜೈಲನ್ನಾಗಿ ಪರಿವರ್ತಿಸಲು ನಿರ್ಧರಿಸಲಾಗಿದೆ.
ತೀರ್ಪು ಪ್ರಕಟಣೆ ದಿನ ಸಿಂಗ್ ಅವರ 10 ಲಕ್ಷ ಬೆಂಬಲಿಗರು ಆಗಮಿಸಬಹುದು, ಹಿಂಸಾಚಾರಕ್ಕೆ ಇಳಿಯಬಹುದು ಎಂಬ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಚಂಡೀಗಢದ ಸೆಕ್ಟರ್ 16ರಲ್ಲಿರುವ ಕ್ರಿಕೆಟ್ ಮೈದಾನವನ್ನು ತಾತ್ಕಾಲಿಕ ಜೈಲು ಮಾಡಿ ಕೊಳ್ಳಲು ಉದ್ದೇಶಿಸಲಾಗಿದೆ. ಇದೇ ಕ್ರೀಡಾಂ ಗಣದಲ್ಲಿ ಕಪಿಲ್ ದೇವ್, ಯುವರಾಜ್, ಹರ್ಭಜನ್ ಸಿಂಗ್ರಂತಹ ಪ್ರಮುಖರು ತಮ್ಮ ಕೌಶಲ್ಯ ವೃದ್ಧಿಸಿಕೊಂಡಿದ್ದರು.
ಇದನ್ನೂ ಓದಿ: 1 ತೀರ್ಪು ಕೇಳಲು 10 ಲಕ್ಷ ಜನ!: ಹರ್ಯಾಣ, ಪಂಜಾಬಿಗೆ ಹಿಂಸೆ ಭೀತಿ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.