ಐಪಿಎಲ್ ಫೈನಲ್'ನಲ್ಲಿ ನಾನು ಆಡಬೇಕಿತ್ತು: ಭಜ್ಜಿ

Published : May 25, 2017, 07:04 PM ISTUpdated : Apr 11, 2018, 12:54 PM IST
ಐಪಿಎಲ್ ಫೈನಲ್'ನಲ್ಲಿ ನಾನು ಆಡಬೇಕಿತ್ತು: ಭಜ್ಜಿ

ಸಾರಾಂಶ

ಮುಂಬೈ ಪರ ಉತ್ತಮ ಬೌಲಿಂಗ್ ಸರಾಸರಿ ಹೊಂದಿದ್ದರೂ ತನ್ನನ್ನು ಕಡೆಗಣಿಸಿರುವುದು ನಿರಾಸೆ ಮೂಡಿಸಿದೆ ಎಂದು ಹೇಳಿದ್ದಾರೆ.

ಮುಂಬೈ(ಮೇ.25): ಐಪಿಎಲ್ ಪ್ಲೇ-ಆಫ್ ಹಾಗೂ ಪುಣೆ ಸೂಪರ್'ಜೈಂಟ್ ತಂಡದ ವಿರುದ್ಧ ತಾನು ಆಡುವ ಹನ್ನೊಂದರ ಬಳಗದಲ್ಲಿರಬೇಕಿತ್ತು ಎಂದು ಅನುಭವಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಹೇಳಿದ್ದಾರೆ.

ಕೆಲವು ತಂತ್ರಗಾರಿಕೆಯಿಂದಾಗಿ ಭಜ್ಜಿ ಹೊರಗುಳಿಯಬೇಕಾಯಿತು ಎಂಬ ಮಾತನ್ನು ಒಪ್ಪದ ಆಫ್'ಸ್ಪಿನ್ನರ್, ಮುಂಬೈ ಪರ ಉತ್ತಮ ಬೌಲಿಂಗ್ ಸರಾಸರಿ ಹೊಂದಿದ್ದರೂ ತನ್ನನ್ನು ಕಡೆಗಣಿಸಿರುವುದು ನಿರಾಸೆ ಮೂಡಿಸಿದೆ ಎಂದು ಹೇಳಿದ್ದಾರೆ.

ಕಳೆದ ವರ್ಷದವರೆಗೂ 11 ಮಂದಿ ಆಟಗಾರರನ್ನು ಆಯ್ಕೆ ಮಾಡುವ ಆಡಳಿತ ಮಂಡಳಿಯ ಭಾಗವಾಗಿದ್ದೆ. ಆದರೆ ಈ ಬಾರಿ ನಾನು ಹೆಚ್ಚಿನ ಸಮಯವನ್ನು ನನ್ನ ಕುಟುಂಬದೊಂದಿಗೆ ಕಳೆದೆ ಎಂದಿರುವ ಅವರು, ಮಹತ್ವದ ಪಂದ್ಯದಲ್ಲಿ ತಂಡದಿಂದ ಹೊರಗಿದ್ದು ಪಂದ್ಯ ವೀಕ್ಷಿಸಿದ್ದು ನನಗೆ ಸಾಕಷ್ಟು ನಿರಾಸೆ ಮೂಡಿಸಿದೆ ಎಂದಿದ್ದಾರೆ.

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಎಲ್ಲಾ ಮಾದರಿಯ ಕ್ರಿಕೆಟ್‌ಗೆ ವಿದಾಯ ಹೇಳಿದ ಕನ್ನಡಿಗ ಕೆ.ಗೌತಮ್‌!
ಭಾರತ ಎದುರು ಅಂಡರ್-19 ಏಷ್ಯಾಕಪ್ ಗೆದ್ದ ಪಾಕ್ ಆಟಗಾರರಿಗೆ ಪ್ರಧಾನಿ ಭಾರೀ ಬಹುಮಾನ ಘೋಷಣೆ!