
ನವದೆಹಲಿ[ಏ.21]: ಕಾಫಿ ವಿತ್ ಕರಣ್ TV ಶೋನಲ್ಲಿ ಮಹಿಳಾ ಅವಹೇಳನ ನಡೆಸಿ ವಿವಾದ ಸೃಷ್ಟಿಸಿದ್ದ ಭಾರತೀಯ ಕ್ರಿಕೆಟಿಗರಾದ ಕೆ.ಎಲ್.ರಾಹುಲ್, ಹಾರ್ದಿಕ್ ಪಾಂಡ್ಯಗೆ ಬಿಸಿಸಿಐ ಸಾರ್ವಜನಿಕ ತನಿಖಾಧಿಕಾರಿ ಡಿ.ಕೆ.ಜೈನ್ ತಲಾ 20 ಲಕ್ಷ ದಂಡ ವಿಧಿಸಿದ್ದಾರೆ.
’ಕಾಫಿ ವಿತ್ ಕರುಣ್’: ಇದೇ ಮೊದಲ ಬಾರಿಗೆ ತುಟಿ ಬಿಚ್ಚಿದ ಕರುಣ್ ಹೇಳಿದ್ದೇನು?
ಈ ಬೆಳವಣಿಗೆ ಕುರಿತು ಬಿಸಿಸಿಐ ತನ್ನ ವೆಬ್ಸೈಟ್ನಲ್ಲಿ ಸುದ್ದಿ ಪ್ರಕಟಿಸಿದ್ದು, 5 ಏಕದಿನ ಪಂದ್ಯಗಳಿಗೆ ಅಮಾನತುಗೊಂಡಿದ್ದ ಇಬ್ಬರ ವಿರುದ್ಧ ಮತ್ತ್ಯಾವುದೇ ಕ್ರಮ ಕೈಗೊಳ್ಳುವುದಿಲ್ಲ. ಪ್ರಕರಣ ಮುಕ್ತಾಯಗೊಂಡಿದೆ ಎಂದು ತಿಳಿಸಿದೆ. ರಾಹುಲ್ ಹಾಗೂ ಪಾಂಡ್ಯಗೆ, ‘ಭಾರತ್ ಕೆ ವೀರ್’ ಮೊಬೈಲ್ ಆ್ಯಪ್ ಮೂಲಕ ಪ್ಯಾರಾ ಮಿಲಿಟರಿಯ 10 ಹುತಾತ್ಮ ಯೋಧರ ಪತ್ನಿಯರಿಗೆ ತಲಾ 1 ಲಕ್ಷ ಸಹಾಯಧನ ನೀಡುವಂತೆ ಸೂಚಿಸಲಾಗಿದೆ. ಇನ್ನುಳಿದ .10 ಲಕ್ಷವನ್ನು ಭಾರತ ಅಂಧರ ಕ್ರಿಕೆಟ್ ಸಂಸ್ಥೆ (ಸಿಎಬಿ) ಖಾತೆಗೆ ಜಮೆ ಮಾಡುವಂತೆ ತನಿಖಾಧಿಕಾರಿ ಆದೇಶಿಸಿದ್ದಾರೆ.
16 ಭಾಷೆಗಳಲ್ಲಿ ತಮ್ಮ ಹೆಸರು ಟ್ಯಾಟು ಹಾಕಿಸಿಕೊಂಡು ಟ್ರೋಲ್ ಆದ ಪಾಂಡ್ಯ..!
ದಂಡ ಪಾವತಿಸಲು ಏ.19ರಿಂದ ಆರಂಭಗೊಂಡು 4 ವಾರಗಳ ಒಳಗೆ ಗಡುವು ನೀಡಲಾಗಿದೆ. ಒಂದೊಮ್ಮೆ ಅಷ್ಟರಲ್ಲಿ ಕಟ್ಟದಿದ್ದಲ್ಲಿ ಪಂದ್ಯದ ಸಂಭಾವನೆಯಲ್ಲಿ ಕಡಿತ ಮಾಡಲಾಗುವುದದು ಎಂದು ಎಚ್ಚರಿಸಲಾಗಿದೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.