ಹಾರ್ದಿಕ್ ಪಾಂಡ್ಯಾಗೆ ಯಶಸ್ವಿ ಸರ್ಜರಿ; ಫ್ಯಾನ್ಸ್‌ಗೆ ಕ್ರಿಕೆಟಿಗನ ಸಂದೇಶ!

Published : Oct 05, 2019, 06:44 PM ISTUpdated : Oct 05, 2019, 06:45 PM IST
ಹಾರ್ದಿಕ್ ಪಾಂಡ್ಯಾಗೆ ಯಶಸ್ವಿ ಸರ್ಜರಿ; ಫ್ಯಾನ್ಸ್‌ಗೆ ಕ್ರಿಕೆಟಿಗನ ಸಂದೇಶ!

ಸಾರಾಂಶ

ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಯಶಸ್ವಿ ಶಸ್ತ್ರ ಚಿಕಿತ್ಸೆ ಮಾಡಲಾಗಿದೆ. ಸರ್ಜರಿ ಬಳಿಕ ಹಾರ್ದಿಕ್ ಪಾಂಡ್ಯ ಅಭಿಮಾನಿಗಳಿಗೆ ವಿಶೇಷ ಸಂದೇಶ ರವಾನಿಸಿದ್ದಾರೆ.

ಲಂಡನ್(ಅ.05): ಸೌತ್ ಆಫ್ರಿಕಾ ವಿರುದ್ದದ ಟಿ20 ಸರಣಿಯಲ್ಲಿ ಕಾಣಿಸಿಕೊಂಡ ಟೀಂ ಇಂಡಿಯಾ ಅಲ್ರೌಂಡರ್ ಹಾರ್ದಿಕ್ ಪಾಂಡ್ಯ ಬಳಿಕ ಟೆಸ್ಟ್ ಸರಣಿಯಿಂದ ದೂರ ಉಳಿದಿದ್ದರು. ಬೆನ್ನು ನೋವಿನಿಂದ ಬಳಲುತ್ತಿದ್ದ ಪಾಂಡ್ಯ ಇದೀಗ ಶಸ್ತ್ರ ಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಲಂಡನ್‌ನಲ್ಲಿ ಹಾರ್ದಿಕ್ ಪಾಂಡ್ಯಗೆ ಯಶಸ್ವಿ ಸರ್ಜರಿ ಮಾಡಲಾಗಿದೆ.

ಇದನ್ನೂ ಓದಿ: ಅಪಘಾತಕ್ಕೀಡಾದ ಅಭಿಮಾನಿಗೆ ಹಾರ್ದಿಕ್ ನೆರವು; ಕಣ್ಣೀರಿಟ್ಟ ಕುಟುಂಬ!

ಸರ್ಜರಿ ಬಳಿಕ ಹಾರ್ದಿಕ್ ಪಾಂಡ್ಯ ಸಾಮಾಜಿಕ ಜಾಲತಾಣದಲ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ. ನನಗಾಗಿ ಪ್ರಾರ್ಥಿಸಿದ, ಸಂದೇಶ ಕಳುಹಿಸಿದ ಎಲ್ಲರಿಗೂ ಧನ್ಯಾವದ. ತಂಡಕ್ಕೆ ಮರಳುವ ಕುರಿತು ಈಗಲೇ ಹೇಳಲು ಸಾಧ್ಯವಿಲ್ಲ ಎಂದು ಹಾರ್ದಿಕ್ ಪಾಂಡ್ಯ ಹೇಳಿದ್ದಾರೆ.

 

ಇದನ್ನೂ ಓದಿ: ಪಾಂಡ್ಯ ಖರೀದಿಸಿದ 4 ಕೋಟಿ ಮೌಲ್ಯದ ನೂತನ ಕಾರಿನ ಮೈಲೇಜ್ 7 ಕಿ.ಮೀ!

ಸದ್ಯ ವಿಶ್ರಾಂತಿಗೆ ಜಾರಿರುವ ಹಾರ್ದಿಕ್ ಪಾಂಡ್ಯ, ನವೆಂಬರ್ 3 ರಿಂದ ಆರಂಭವಾಗುತ್ತಿರುವ ಬಾಂಗ್ಲಾದೇಶ ವಿರುದ್ದದ ಟಿ20 ಸರಣಿಗೂ ಅಲಭ್ಯರಾಗಿದ್ದಾರೆ.  ಭಾರತದ ಪರ 11 ಟೆಸ್ಟ್, 54 ಏಕದಿನ ಹಾಗೂ 40 ಟಿ20 ಪಂದ್ಯ ಆಡಿರುವ ಹಾರ್ದಿಕ್ ಪಾಂಡ್ಯ, 2020ರ ಟಿ20 ವಿಶ್ವಕಪ್ ಟೂರ್ನಿಗೆ ಭಾರತದ ತಂಡ ಪ್ರಮುಖ ಆಟಗಾರ ಎಂದೇ ಗುರುತಿಸಿಕೊಂಡಿದ್ದಾರೆ. 

PREV

ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗೂ ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಂಜು ಸ್ಯಾಮ್ಸನ್ ನನ್ನ ಅಣ್ಣನಿದ್ದಂತೆ; ಇಬ್ಬರ ಪೈಪೋಟಿ ಬಗ್ಗೆ ಮನಬಿಚ್ಚಿ ಮಾತಾಡಿದ ಜಿತೇಶ್ ಶರ್ಮಾ
ದಕ್ಷಿಣ ಆಫ್ರಿಕಾ ಎದುರು ಗೆದ್ದರೂ ನಿಂತಿಲ್ಲ ಚಿಂತೆ: 2ನೇ ಟಿ20ಗೆ ಭಾರತ ತಂಡದಲ್ಲಿ ಬದಲಾವಣೆ?