
ನವದೆಹಲಿ[ಡಿ.04]: ಭಾರತ ಮಹಿಳಾ ತಂಡದ ಮಾಜಿ ಕೋಚ್ ರಮೇಶ್ ಪೊವಾರ್ರನ್ನು ಮತ್ತೊಮ್ಮೆ ಪ್ರಧಾನ ಕೋಚ್ ಆಗಿ ನೇಮಿಸಬೇಕು ಎಂದು ಭಾರತ ಟಿ20 ತಂಡದ ನಾಯಕಿ ಹರ್ಮನ್ಪ್ರೀತ್ ಕೌರ್ ಹಾಗೂ ಉಪನಾಯಕಿ ಸ್ಮೃತಿ ಮಂಧನಾ, ಬಿಸಿಸಿಐಗೆ ಪತ್ರ ಬರೆದಿದ್ದಾರೆ.
ಬಿಸಿಸಿಐ ಆಡಳಿತ ಸಮಿತಿ ಮುಖ್ಯಸ್ಥ ವಿನೋದ್ ರಾಯ್ ಈ ವಿಷಯನ್ನು ಸ್ಪಷ್ಟಪಡಿಸಿದ್ದು, 2021ರ ವರೆಗೂ ಪೊವಾರ್ ಕೋಚ್ ಆಗಿ ಕಾರ್ಯನಿರ್ವಹಿಸಲು ಅವಕಾಶ ನೀಡಬೇಕೆಂದು ಕೋರಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ ಕೆಲ ಆಟಗಾರ್ತಿಯರು ಮಿಥಾಲಿಗೆ ಬೆಂಬಲ ನೀಡಿದ್ದು, ಪೊವಾರ್ ಮುಂದುವರಿಯುವುದು ಬೇಡ ಎನ್ನುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.
ಭಾರತ ಮಹಿಳಾ ಕ್ರಿಕೆಟ್ ತಂಡದ ಹಿರಿಯ ಆಟಗಾರ್ತಿ ಮಿಥಾಲಿ ರಾಜ್- ಕೋಚ್ ಆಗಿದ್ದ ರಮೇಶ್ ಪೊವಾರ್ ನಡುವಿನ ಕಿತ್ತಾಟದಿಂದ ಪೊವಾರ್ ತಲೆದಂಡವಾಗಿದೆ. ಇದೀಗ ನೂತನ ಕೋಚ್ ಆಯ್ಕೆ ಮಾಡಲು ಅರ್ಹರಿಂದ ಬಿಸಿಸಿಐ ಅರ್ಜಿ ಆಹ್ವಾನಿಸಿದೆ. ಕನ್ನಡಿಗ ವೆಂಕಟೇಶ್ ಪ್ರಸಾದ್ ಕೋಚ್ ಆಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ನನ್ನ ಜೀವನದ ಕರಾಳ ದಿನ: ಮಿಥಾಲಿ ಬೇಸರ
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. IPL Live ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.