ಟೀಂ ಇಂಡಿಯಾ ಅಭಿಮಾನಿಗಳ ಪಾಲಿಗಿದು ಸಿಹಿ ಸುದ್ದಿ...!

By Suvarna Web DeskFirst Published Jun 19, 2017, 6:39 PM IST
Highlights

ಕಳೆದ ವರ್ಷ ಭಾರತದಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ಹರ್ಷಾ ಬೋಗ್ಲೆ ಅವರನ್ನು ಯಾವುದೇ ಕಾರಣ ನೀಡದೇ ಬಿಸಿಸಿಐ ವೀಕ್ಷಕ ವಿವರಣೆ ಪ್ಯಾನಲ್'ನಿಂದ ಹೊರಗಟ್ಟಿತ್ತು.

ಬೆಂಗಳೂರು(ಜೂ.19): ಐಸಿಸಿ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಪಾಕ್ ಎದುರು ಎಡವಿ ಟೀಂ ಇಂಡಿಯಾ ತನ್ನ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ದು ಎಲ್ಲರಿಗೂ ಗೊತ್ತೇ ಇದೆ.

ಆದರೆ ಇದೀಗ ಆ ನೋವನ್ನು ಮರೆಸುವ ಹೊಸ ಸುದ್ದಿಯೊಂದು ಟೀಂ ಇಂಡಿಯಾ ಅಭಿಮಾನಿಗಳಿಗಾಗಿ ಹೊರಬಿದ್ದಿದೆ. ಅದೇನಪ್ಪಾ ಸುದ್ದಿ ಅಂತಿರಾ..?

ಹೌದು, ಮುಂಬರುವ ವೆಸ್ಟ್'ಇಂಡಿಸ್ ಪ್ರವಾಸದ ವೇಳೆಗೆ ಖ್ಯಾತ ಮಾತಿನ ಮಲ್ಲ ಹರ್ಷಾ ಬೋಗ್ಲೆ ಕಾಮೆಂಟೇಟರಿ ಬಾಕ್ಸ್ ಕೂಡಿಕೊಳ್ಳಲಿದ್ದಾರೆ.

ಈ ವಿಚಾರವನ್ನು ಹರ್ಷಾ ಬೋಗ್ಲೆ ಸ್ವತಃ ಟ್ವಿಟರ್'ನಲ್ಲಿ ಸ್ಪಷ್ಟಪಡಿಸಿದ್ದು, ನಾನು ವೆಸ್ಟ್'ಇಂಡಿಸ್ ತೆರಳುತ್ತಿದ್ದು, ಅಲ್ಲಿ ಕ್ರಿಕೆಟ್ ಕಾಮೆಂಟರಿ ಮಾಡಲಿದ್ದೇನೆ. ನಿಮ್ಮ ಬೆಂಬಲಕ್ಕೆ ನಾನು ಆಭಾರಿ ಎಂಬರ್ಥದಲ್ಲಿ ಟ್ವೀಟ್ ಮಾಡಿದ್ದಾರೆ.

I go from here to the West Indies. Am looking forward to hosting cricket and doing commentary from there. Your support has meant a lot to me

— Harsha Bhogle (@bhogleharsha) 18 June 2017

ಕಳೆದ ವರ್ಷ ಭಾರತದಲ್ಲಿ ನಡೆದ ಟಿ20 ವಿಶ್ವಕಪ್ ಬಳಿಕ ಹರ್ಷಾ ಬೋಗ್ಲೆ ಅವರನ್ನು ಯಾವುದೇ ಕಾರಣ ನೀಡದೇ ಬಿಸಿಸಿಐ ವೀಕ್ಷಕ ವಿವರಣೆ ಪ್ಯಾನಲ್'ನಿಂದ ಹೊರಗಟ್ಟಿತ್ತು.

ಬಿಸಿಸಿಐನ ಈ ಕ್ರಮದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು.

ವಿಶ್ಲೇಷಣಾತ್ಮಕ ವೀಕ್ಷಕ ವಿವರಣೆಯಿಂದ ತನ್ನದೇ ಆದ ಲಕ್ಷಾಂತರ ಕ್ರಿಕೆಟ್ ಅಭಿಮಾನಿಗಳನ್ನು ಹೊಂದಿರುವ ಹರ್ಷಾ ಬೋಗ್ಲೆ, ಆ ನಂತರ ಸಾಮಾಜಿಕ ಜಾಲತಾಣದಲ್ಲಿ ಇನ್ನಷ್ಟು ಸಕ್ರಿಯರಾಗಿದ್ದರು.

ಇದೀಗ ಜೂನ್ 23ರಿಂದ ಆರಂಭವಾಗಲಿರುವ ಭಾರತ-ವೆಸ್ಟ್'ಇಂಡಿಸ್  ಏಕದಿನ ಪಂದ್ಯದಲ್ಲಿ ಹರ್ಷಾ ಬೋಗ್ಲೆ ವೀಕ್ಷಕ ವಿವರಣೆಗಾರರಾಗಿ ಕಾಣಿಸಿಕೊಳ್ಳಲಿದ್ದಾರೆ.

click me!