
ಚಂಡೀಗಢ[ಜೂ.09]: ಕ್ರೀಡಾಪಟುಗಳಿಗೆ ಕೋಟಿ ಕೋಟಿ ಬಹುಮಾನ ಮೊತ್ತ ನೀಡಿ ದೇಶದಲ್ಲಿ ಕ್ರೀಡೆಗೆ ಮಾದರಿ ಎನಿಸಿಕೊಂಡಿದ್ದ ಹರ್ಯಾಣ, ಇದೀಗ ಅನಗತ್ಯ ವಿವಾದಗಳಿಗೆ ಸಿಲುಕುತ್ತಿದೆ.
ರಾಜ್ಯದ ಕ್ರೀಡಾ ಕಾರ್ಯದರ್ಶಿ ಅಶೋಕ್ ಖೇಮ್ಕಾ ಹೊರಡಿಸಿದ ವಿಚಿತ್ರ ಆದೇಶವೊಂದು ಭಾರೀ ಟೀಕೆಗೆ ಗುರಿಯಾಯಿತು. ಹರ್ಯಾಣದ ಕ್ರೀಡಾ ಪಟುಗಳು ತಮ್ಮ ವೃತ್ತಿ (ವೇತನ, ಬಹುಮಾನ ಮೊತ್ತ) ಹಾಗೂ ವಾಣಿಜ್ಯಗಳಿಕೆ (ಜಾಹೀರಾತು ಒಪ್ಪಂದ)ದಿಂದ ಸಂಪಾದಿಸುವ ಮೊತ್ತದ ಮೂರನೇ ಒಂದು ಭಾಗವನ್ನು ಸರ್ಕಾರಕ್ಕೆ ಪಾವತಿಸಬೇಕು. ಈ ಹಣವನ್ನು ರಾಜ್ಯದ ಕ್ರೀಡಾಭಿವೃಗೆ ಬಳಸಲಾಗುತ್ತದೆ ಎಂದು ಖೇಮ್ಕಾ ಸೂಚಿಸಿದ್ದರು.
ಈ ಆದೇಶಕ್ಕೆ ಹರ್ಯಾಣದ ಕ್ರೀಡಾಪಟುಗಳು ಭಾರೀ ಟೀಕೆ, ಆಕ್ರೋಶ ವ್ಯಕ್ತಪಡಿಸಿದರು. ಖ್ಯಾತ ಕುಸ್ತಿಪಟುಗಳಾದ ಸುಶೀಲ್ ಕುಮಾರ್, ಯೋಗೇಶ್ವರ್ ದತ್, ಬಬಿತಾ ಫೋಗಾಟ್ ಸೇರಿದಂತೆ ಹಲವರು ಮಾಧ್ಯಮಗಳಲ್ಲಿ ಸರ್ಕಾರದ ನಡೆಗೆ ಬೇಸರ ವ್ಯಕ್ತಪಡಿಸಿದ ಬಳಿಕ, ಮುಖ್ಯಮಂತ್ರಿ ಮನೋಹರ್ ಲಾಲ್ ಮಧ್ಯ ಪ್ರವೇಶಿಸಬೇಕಾಯಿತು. ‘ಕ್ರೀಡಾ ಪಟುಗಳಿಗೆ ಸಮಸ್ಯೆಯಾಗಲು ಬಿಡುವುದಿಲ್ಲ. ಮುಂದಿನ ಆದೇಶದ ವರೆಗೂ ಈ ನಿಯಮ ಜಾರಿಗೆ ತರಬಾರದು’ ಎಂದು ಕ್ರೀಡಾ ಇಲಾಖೆಗೆ ಸೂಚಿಸಿದ್ದಾರೆ.
ಕ್ರಿಕೆಟ್ ಮತ್ತು ಕ್ರೀಡಾ ಜಗತ್ತಿನ (Sports News in Kannada) ಕ್ಷಣಕ್ಷಣದ ಕನ್ನಡ ಸುದ್ದಿ ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಐಪಿಎಲ್ ಲೈವ್ ಸೇರಿದಂತೆ ಟೀಂ ಇಂಡಿಯಾದ ಬ್ರೇಕಿಂಗ್ ಸುದ್ದಿ (Cricket News in Kannada), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ ಸಂಪೂರ್ಣ ಮಾಹಿತಿ ನಿಮ್ಮ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗೂ ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.